AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋರುತಿಹುದು ಏರ್​ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್

ಸೋರುತಿಹುದು ಏರ್​ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್

ನವೀನ್ ಕುಮಾರ್ ಟಿ
| Edited By: |

Updated on: May 27, 2026 | 7:45 AM

Share

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಟರ್ಮಿನಲ್-1ರ ಮೇಲ್ಛಾವಣಿ ಮತ್ತೆ ಸೋರಿದ್ದು, ಒಳಗೆಲ್ಲ ನೀರು ತುಂಬಿ ಪ್ರಯಾಣಿಕರು ಪರದಾಡುವಂತಾಯಿತು. ಭಾರಿ ಮಳೆ ಹಾಗೂ ಟರ್ಮಿನಲ್ ಒಳಗೆ ನೀರು ಸೋರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ದೇವನಹಳ್ಳಿ, ಮೇ 27: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಹಾಗೂ ರಾತ್ರಿ ಭಾರಿ ಮಳೆ ಸುರಿದಿದೆ. ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ವ್ಯಾಪ್ತಿಯಲ್ಲೂ ಭಾರಿ ಮಳೆಯಾಗಿದ್ದು, ಹಲವು ಅವಾಂತರಗಳು ಸೃಷ್ಟಿಯಾದವು. ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ರನ್‌ವೇ ಸ್ಪಷ್ಟವಾಗಿ ಕಾಣಿಸದೆ ವಿಮಾನಗಳ ಟೇಕಾಫ್ ಹಾಗೂ ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿ ಭಾರಿ ವಿಳಂಬವಾಯಿತು. ಅನೇಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಯಿತು.

ಏರ್‌ಪೋರ್ಟ್‌ನ ಟರ್ಮಿನಲ್-1 ರ ಮೇಲ್ಛಾವಣಿಯಲ್ಲಿ ನೀರು ಸೋರಲು ಆರಂಭಿಸಿ ಟರ್ಮಿನಲ್ ಒಳಗೆಲ್ಲ ನೀರು ತುಂಬಿಕೊಂಡು ಪ್ರಯಾಣಿಕರು ಪರದಾಡುವಂತಾಯಿತು. ಟರ್ಮಿನಲ್ ಛಾವಣಿ ಸೋರುತ್ತಿರುವ ಮತ್ತು ಒಳಗೆ ಜಲಪ್ರವಾಹ ಸಂಭವಿಸಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಹಿಂದೆ ಕೂಡ ಕೆಲವು ಬಾರಿ ಟರ್ಮಿನಲ್ ಮೇಲ್ಛಾವಣಿ ಸೋರಿದ ಬಗ್ಗೆ ವರದಿಯಾಗಿದ್ದು, ವಿಡಿಯೋಗಳೂ ವೈರಲ್ ಆಗಿದ್ದವು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More