ಕುಂಭಮೇಳ ಮತ್ತು ಬೆಂಗಳೂರು ಕಾಲ್ತುಳಿತ ಪ್ರಕರಣಗಳನ್ನು ಹೋಲಿಸುವುದು ಬೌದ್ಧಿಕ ದಿವಾಳಿತನದ ಪ್ರತೀಕ: ಪ್ರಲ್ಹಾದ್ ಜೋಶಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 09, 2025 | 2:04 PM

ಜೂನ್ ಮೂರರ ನಡುರಾತ್ರಿಯಿಂದ ಬೆಳಗಿನ ಜಾವದವರೆಗೆ ಕೆಲಸ ಮಾಡಿ ಪೊಲೀಸರು ಮನೆಗಳಿಗೆ ತೆರಳಿ ಮಲಗಿದ್ದಾರೆ, ಬೆಳಗಿನ ರೂಟೀನ್ ಬ್ರೀಫಿಂಗ್ ನೀಡಲು ಬರಲಾಗಲ್ಲ ಅಂತ ಬೆಂಗಳೂರು ಪೊಲೀಸ್ ಕಮೀಷನರ್ ಗೃಹ ಮಂತ್ರಿಗೆ ಸಂದೇಶ ನೀಡಿದ್ದಾರೆ, ಸಿಎಂ, ಡಿಸಿಎಂ ಮತ್ತು ಹೆಚ್​ಎಂ; ಡಿಸಿಪಿಗಳ ಜೊತೆ ಮಾತಾಡಿ ಆರ್​ಸಿಬಿ ಆಟಗಾರರಿರಗೆ ಸತ್ಕಾರ ಕೂಟವನ್ನು ಏರ್ಪಡಿಸಿ ದುರಂತಕ್ಕೆ ಕಾರಣವಾಗಿದ್ದಾರೆ ಎಂದು ಜೋಶಿ ಹೇಳಿದರು.

ಹುಬ್ಬಳ್ಳಿ, ಜೂನ್ 9: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಬೆಂಗಳೂರಲ್ಲಿ ನಡೆದ ಕಾಲ್ತುಳಿತ ಪ್ರಕರಣವನ್ನು ಮತ್ತು ಪಹಲ್ಗಾಮ್ ಉಗ್ರರ ದಾಳಿ ಹಾಗೂ ಪ್ರಯಾಗ್​ರಾಜ್​ ಕುಂಭಮೇಳದಲ್ಲಿ ಸಂಭಸಿದ ಕಾಲ್ತುಳಿತಕ್ಕೆ ಹೋಲಿಕೆ ಮಾಡಿ ಕರ್ನಾಟಕದ ಮಂತ್ರಿಗಳು ತಮ್ಮ ಬೌದ್ಧಿಕ ದಿವಾಳಿತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದರು. ಕುಂಭಮೇಳದಲ್ಲಿ ಯಾರದ್ದೋ ತಪ್ಪನಿಂದ ಕಾಲ್ತುಳಿತ ನಡೆದಿದ್ದು ಅದೊಂದು ಆಕಸ್ಮಿಕ, ಆದರೆ ಬೆಂಗಳೂರಲ್ಲಿ ನಡೆದ ದುರಂತಕ್ಕೆ ಸರಕಾರದ ಮೂಖರ್ತನವೇ ಕಾರಣ ಎಂದು ಹೇಳಿದ ಜೋಶಿ, ಮಾನ-ಮರ್ಯಾದೆ ಮತ್ತು ನಾಚಿಕೆಯಿಲ್ಲದೆ ಎರಡನ್ನು ಹೋಲಿಸುವ ಪ್ರಯತ್ನ ನಡೆದಿದೆ ಎಂದರು.

ಇದನ್ನೂ ಓದಿ:  ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು: ಪ್ರಶಾಂತ್ ಮನ ಮಿಡಿಯುವ ಮಾತು

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 09, 2025 02:03 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.