AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಧಪೂಜೆಗೆ ಖರೀದಿ ಜೋರು: ಬೆಲೆ ಏರಿಕೆ ಮಧ್ಯೆಯೂ ಮಾರುಕಟ್ಟೆಗೆ ದಾಂಗುಡಿಯಿಟ್ಟ ಜನ

ಆಯುಧಪೂಜೆಗೆ ಖರೀದಿ ಜೋರು: ಬೆಲೆ ಏರಿಕೆ ಮಧ್ಯೆಯೂ ಮಾರುಕಟ್ಟೆಗೆ ದಾಂಗುಡಿಯಿಟ್ಟ ಜನ

ಗಂಗಾಧರ​ ಬ. ಸಾಬೋಜಿ
|

Updated on:Oct 01, 2025 | 7:55 AM

Share

ಆಯುಧಪೂಜೆ ಹಿನ್ನೆಲೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು, ಪೂಜಾ ಸಾಮಾಗ್ರಿಗಳ ಖರೀದಿ ಜೋರಾಗಿದೆ. ಸಾವಿರಾರು ಜನರು ಬೆಳ್ಳಂಬೆಳಿಗ್ಗೆ ಖರೀದಿಗೆ ಮುಂದಿದ್ದರು. ಜನ ಸಂದಣಿಯಿಂದಾಗಿ ಟೌನ್ ಹಾಲ್‌ನಿಂದ ಕೆ.ಆರ್. ಮಾರುಕಟ್ಟೆವರೆಗೆ ಸಂಚಾರ ದಟ್ಟಣೆ ಉಂಟಾಗಿದೆ. ಫ್ಲೈಓವರ್ ಮೇಲೆ ವಾಹನಗಳನ್ನು ನಿಲ್ಲಿಸಲಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ಅಕ್ಟೋಬರ್​ 01: ಇಂದು ಎಲ್ಲೆಡೆ ನವರಾತ್ರಿ ಆಯುಧ ಪೂಜೆ (Ayudha Puja) ಸಂಭ್ರಮ. ಹೀಗಾಗಿ ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಬೆಲೆ ಏರಿಕೆ ಮಧ್ಯೆ ಜನರು ಹೂವು, ಹಣ್ಣು, ತರಕಾರಿ, ಪೂಜಾ ಸಾಮಾಗ್ರಿ ಖರೀದಿಸುತ್ತಿದ್ದಾರೆ. ಕೆ.ಆರ್​.ಮಾರುಕಟ್ಟೆಗೆ ಬರುವವರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಿದೆ. ಟೌನ್ ಹಾಲ್​ನಿಂದ‌ ಕೆ.ಆರ್.ಮಾರುಕಟ್ಟೆವರೆಗೆ ಟ್ರಾಫಿಕ್​ ಜಾಮ್ ಉಂಟಾಗಿದ್ದು, ಫ್ಲೈಓವರ್ ಮೇಲೂ ಸಾರ್ವಜನಿಕರು ವಾಹನ ಪಾರ್ಕ್‌ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

 

Published on: Oct 01, 2025 07:42 AM
Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More