AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಅಮಲಿನಲ್ಲಿ ಕಿರಿಕ್: ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್

ಕುಡಿದ ಅಮಲಿನಲ್ಲಿ ಕಿರಿಕ್: ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್

ರಾಮು, ಆನೇಕಲ್​
| Edited By: |

Updated on: Dec 16, 2025 | 8:38 PM

Share

ಬೆಂಗಳೂರಿನ ಆನೇಕಲ್‌ನಲ್ಲಿರುವ ಮಾರುತಿ ಬಾರ್ ಆಂಡ್ ರೆಸ್ಟೋರೆಂಟ್‌ನಲ್ಲಿ ಡಿ.16ರಂದು ಕುಡಿದ ಮತ್ತಿನಲ್ಲಿ ಪ್ರಕಾಶ್ ಎಂಬುವವರ ಮೇಲೆ ಮೂವರು ವ್ಯಕ್ತಿಗಳು ಏಕಾಏಕಿ ಹಲ್ಲೆ ಮಾಡಿದ್ದಾರೆ. ಸಣ್ಣ ಕಿರಿಕಿರಿ ಕಾರಣಕ್ಕೆ ಈ ದಾಳಿ ನಡೆದಿದ್ದು, ಗಾಯಗೊಂಡ ಪ್ರಕಾಶ್ ಅವರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಬೆಂಗಳೂರು,ಡಿ.16: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬರ ತಲೆಗೆ ಬಿಯರ್​​ ಬಾಟಲಿಯಿಂದ ಹೊಡೆದಿದ್ದಾರೆ. ಬೆಂಗಳೂರಿನ ಆನೇಕಲ್​​ನ ಮಾರುತಿ ಬಾರ್ ಆಂಡ್​​ ರೆಸ್ಟೋರೆಂಟ್​ನಲ್ಲಿ ಈ ಘಟನೆ ನಡೆದಿದೆ. ಬಾರ್​​ಗೆ ಕುಡಿಯಲು ಬಂದಿದ್ದ, ಪ್ರಕಾಶ್ ಎಂಬುವವರ ಮೇಲೆ ಇನ್ನೊಂದು ಟೇಬಲ್​​​ನಲ್ಲಿದ್ದ ಮೂವರು ಏಕಾಏಕಿ ಬಂದು ಪ್ರಕಾಶ್​​ ಮೇಲೆ ದಾಳಿ ಮಾಡಿದ್ದಾರೆ. ನಂತರ ಅಲ್ಲಿಂದ ಈ ಗ್ಯಾಂಗ್​​ ಪರಾರಿಯಾಗಿದೆ. ಇನ್ನು ಬಾಟಲಿಯಿಂದ ತಲೆಗೆ ಹೊಡೆದ ಪರಿಣಾಮ ವಿಪರೀತ ರಕ್ತ ಬಂದಿದೆ. ಗಾಯಾಳು ಪ್ರಕಾಶ್ ಅವರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ. ಈ ದಾಳಿ ಮಾಡಲು ಕಾರಣ ಏನು ಎಂಬ ಬಗ್ಗೆ ತಿಳಿದು ಬಂದಿಲ್ಲ. ಬಾರ್​​​ನ ಇತರ ಗ್ರಾಹಕರು ಹೇಳಿರುವ ಪ್ರಕಾರ, ಚಿಕ್ಕ ಕಿರಿಕಿರಿ ಆಗಿದೆ, ಆ ಕಾರಣಕ್ಕೆ ಪ್ರಕಾಶ್​​ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Ramu Ram
Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More