AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಗಂಗಾಧರ​ ಬ. ಸಾಬೋಜಿ
|

Updated on: Mar 24, 2026 | 6:39 PM

Share

ಬೆಂಗಳೂರಿನ ಬಾರ್​ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್ ಕೊರತೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿವೆ. ಮಾಂಸಾಹಾರ ತಯಾರಿಕೆ ಕಷ್ಟವಾಗಿ, ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡಿದೆ. ಬ್ಲಾಕ್ ಮಾರ್ಕೆಟ್‌ನಲ್ಲಿ ಸಿಲಿಂಡರ್‌ಗಳು 8 ರಿಂದ 10 ಸಾವಿರ ರೂಪಾಯಿಗೆ ಸಿಗುತ್ತಿದೆ. ಈ ಬಗ್ಗೆ ಬಾರ್​​ ಮಾಲೀಕರು ಹೇಳುವುದು ಹೀಗೆ.

ಬೆಂಗಳೂರು, ಮಾರ್ಚ್​ 24: ಬೆಂಗಳೂರಿನ ಬಾರ್​ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಲಿಂಡರ್ ಅಭಾವದ ಎಫೆಕ್ಟ್​​ಗೆ ಮಾಂಸಾಹಾರ ಪದಾರ್ಥಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಗ್ರಾಹಕರು ಇಷ್ಟಪಡುವ ಚಿಕನ್, ಮಟನ್ ಮತ್ತು ಫಿಶ್ ಐಟಂಗಳನ್ನು ನೀಡಲು ಮಾಲೀಕರಿಗೆ ಕಷ್ಟವಾಗಿದೆ. ಸದ್ಯ ಸಲಾಡ್ ಮತ್ತು ಕೆಲವು ಸರಳ ಐಟಂಗಳನ್ನು ಮಾತ್ರ ನೀಡಲಾಗುತ್ತಿದೆ. ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಗ್ರಾಹಕರು ನಾನ್-ವೆಜ್‌ಗಾಗಿ ಬರುತ್ತಿದ್ದರೂ, ಗ್ಯಾಸ್ ಇಲ್ಲದ ಕಾರಣ ಅವರಿಗೆ ಬೇಕಾದ ಆಹಾರವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಬಾರ್​ ಮತ್ತು ರೆಸ್ಟೋರೆಂಟ್ ಮಾಲೀಕರು ಹೇಳುವುದೇನು ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More