AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಯುವಕ

ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಯುವಕ

ಅಕ್ಷಯ್​ ಪಲ್ಲಮಜಲು​​
|

Updated on:Dec 18, 2025 | 10:20 AM

Share

ಬೆಂಗಳೂರಿನ ನೆಲಮಂಗಲದಲ್ಲಿ ಪೈಪ್‌ಲೈನ್ ಕಾಮಗಾರಿಯ ಗುಂಡಿ ಸರಿಯಾಗಿ ಮುಚ್ಚದ ಕಾರಣ ಬೈಕ್ ಅಪಘಾತ ಸಂಭವಿಸಿದೆ. ಬೈಕ್ ಸವಾರ ತಬ್ರೇಜ್ ಮತ್ತೊಬ್ಬರ ಬ್ರೇಕ್ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯಲ್ಲಿ ತಬ್ರೇಜ್ ನಿಮಾನ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ನೆಲಮಂಗಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು, ಡಿ. 18: ಬೈಕ್​​​ ಸವಾರರೊಬ್ಬರು ಅಪಘಾತವನ್ನು ತಪ್ಪಿಸಲು ಹೋಗಿ ಬಿದ್ದು ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಬೆಂಗಳೂರಿನ ನೆಲಮಂಗಲದ ಸುಭಾಷ್ ನಗರದ ಬಜಾಜ್ ಶೋ ರೂಮ್ ಬಳಿ ಈ ಘಟನೆ ನಡೆದಿದೆ. ಮುಂದಿನಿಂದ ಹೋಗುತ್ತಿದ್ದ ಬೈಕ್ ಸವಾರ​​​ ಗುಂಡಿ ಇದೆ ಎಂದು ಏಕಾಏಕಿ ಬ್ರೇಕ್​​ ಹಾಕಿದ್ದಾನೆ. ಹಿಂದೆಯಿಂದ ವೇಗವಾಗಿ ಬರುತ್ತಿದ್ದ ತಬ್ರೇಜ್ ಎಂಬ ಬೈಕ್​ ಸವಾರ ಅಪಘಾತ ತಪ್ಪಿಸಲು ಹೋಗಿ ಬೈಕ್​​ಗೆ ಡಿಕ್ಕಿ ಹೊಡೆದಿದ್ದಾರೆ. ಇದರ ಪರಿಣಾಮ ತಬ್ರೇಜ್​​ಗೆ ಗಂಭೀರ ಗಾಯಗಳಾಗಿವೆ. ತಬ್ರೇಜ್ ಇಸ್ಲಾಂಪುರದ ನಿವಾಸಿ ಎಂದು ಹೇಳಲಾಗಿದೆ. ಇದೀಗ ಅವರಿಗೆ ನಿಮಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ತಬ್ರೇಜ್ ಗಂಭೀರ ಗಾಯದಿಂದ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಸುಭಾಷ್ ನಗರದ ಬಜಾಜ್ ಶೋ ರೂಮ್ ಬಳಿ ಪೈಪ್ ಲೈನ್ ಮಾಡಲು ತೆಗೆದಿದ್ದ ಗುಂಡಿ ಸಂಪೂರ್ಣವಾಗಿ ಮುಚ್ಚದ ಪರಿಣಾಮ ಈ ಅಪಘಾತ ನಡೆದಿದೆ. ಇದೀಗ ಈ ಘಟನೆಯ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

 

 

 

Published on: Dec 18, 2025 10:12 AM