ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಧಗಧಗನೆ ಹೊತ್ತಿ ಉರಿದ ಕಾರು

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದ ಬಳಿ ಐಟಿಸಿ ವಿಂಡ್ಸರ್ ಮ್ಯಾನರ್ ಸಮೀಪ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಸುಟ್ಟು ಕರಕಲಾಯಿತು. ಟೈರ್ ಮತ್ತು ಡೀಸೆಲ್ ಟ್ಯಾಂಕ್ ಸ್ಫೋಟಗೊಂಡ ದೃಶ್ಯಗಳು ‘ಟಿವಿ9’ ಕ್ಯಾಮರಾದಲ್ಲಿ ದಾಖಲಾಗಿವೆ. ಘಟನೆಯ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆಯ ವಿಡಿಯೋ ಇಲ್ಲಿದೆ.

ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿದ ಘಟನೆ ಸ್ಥಳೀಯರಲ್ಲಿ ಆತಂಕವನ್ನು ಹುಟ್ಟುಹಾಕಿತು. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನ ಟೈರ್ ಮತ್ತು ಡೀಸೆಲ್ ಟ್ಯಾಂಕ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಘಟನೆಯ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಎಂ ನಿವಾಸದ ಸಮೀಪ ನಡೆದ ಈ ಘಟನೆ ಆತಂಕಕ್ಕೆ ಕಾರಣವಾಯಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:50 pm, Fri, 12 September 25

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us