AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರದ ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ

ಪರಪ್ಪನ ಅಗ್ರಹಾರದ ಕೈದಿಗಳು ಬೆಳೆದ ತರಕಾರಿ ಮುಗಿಬಿದ್ದು ಖರೀದಿಸಿದ ಅಧಿಕಾರಿಗಳು, ಸಿಬ್ಬಂದಿ

ಪ್ರಸನ್ನ ಹೆಗಡೆ
|

Updated on: Jul 05, 2026 | 7:47 AM

Share

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳು ಸಾವಯವ ಪದ್ಧತಿಯಲ್ಲಿ ಬೆಳೆದ ತರಕಾರಿಗಳನ್ನು ಜೈಲು ಇಲಾಖೆ ಕಚೇರಿ ಮುಂದೆ ಸಂತೆ ಮಾದರಿಯಲ್ಲಿ ಮಾರಾಟ ಮಾಡಲಾಗಿದ್ದು, ಅಧಿಕಾರಿಗಳು ಮುಗಿಬಿದ್ದು ಖರೀದಿಸಿದ್ದಾರೆ. ಮುಂದಿನ ದಿನಗಳಲ್ಲಿ ತರಕಾರಿಯನ್ನ ಸಂತೆ ಮತ್ತು ಮಾರುಕಟ್ಟೆಯಲ್ಲಿ ಮಾರಾಟ ಮಾಡಲೂ ಸಿದ್ದತೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು, ಜುಲೈ 05: ಸೆಂಟ್ರಲ್‌ ಜೈಲ್ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳು ಬೆಳೆದ ತರಕಾರಿಯನ್ನು ಕಾರಾಗೃಹ ಇಲಾಖೆಯ ಕಚೇರಿ ಮುಂದೆ ಸಂತೆ ಮಾದರಿಯಲ್ಲಿ ಸಿಬ್ಬಂದಿ ಮಾರಾಟ ಮಾಡಿದ್ದು, ಅಧಿಕಾರಿಗಳು ಮತ್ತು ಕಚೇರಿ ಸಿಬ್ಬಂದಿ ಅವುಗಳನ್ನು ಮುಗಿಬಿದ್ದು ಖರೀದಿ ಮಾಡಿದ ದೃಶ್ಯಗಳು ಕಂಡುಬಂದಿವೆ. ಕೈದಿಗಳು ಬೆಳೆದ ತರಕಾರಿ ಮಾರಾಟದಂತಹ ವಿನೂತನ ಪ್ರಯತ್ನಕ್ಕೆ ಕಾರಾಗೃಹ ಇಲಾಖೆ ಡಿಜಿ ಅಲೋಕ್ ಕುಮಾರ್​​ ಮುಂದಾಗಿದ್ದು, ಮುಂದಿನ ದಿನಗಳಲ್ಲಿ ತರಕಾರಿಯನ್ನ ಸಂತೆ ಮತ್ತು ಮಾರುಕಟ್ಟೆಯಲ್ಲಿ ಮಾರಾಟ ಮಾಡಲೂ ಸಿದ್ದತೆ ನಡೆದಿದೆ. ಕೇವಲ ತರಕಾರಿ ಅಲ್ಲದೆ ಬಟ್ಟೆ ಸೇರಿದಂತೆ ಗೃಹೋಪಯೋಗಿ ವಸ್ತುಗಳನ್ನ ಸಹ ಮಾರಾಟ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us