ಹೊಳೆಯಂತಾದ ಬೆಂಗಳೂರು ರಸ್ತೆಗಳು, ಡಿಕೆ ಶಿವಕುಮಾರ್ ಚನ್ನಪಟ್ಟಣದ ಚುನಾವಣೆಯಲ್ಲಿ ಬ್ಯೂಸಿ!

ಅರುಣ್​ ಕುಮಾರ್​ ಬೆಳ್ಳಿ

Updated on: Oct 21, 2024 | 10:33 AM

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಲ್ಲಿದ್ದಾರೆ ಅಂತ ಬೆಂಗಳೂರು ನಿವಾಸಿಗಳಿಗೆ ಚೆನ್ನಾಗಿ ಗೊತ್ತು. ಚನ್ನಪಟ್ಟಣದಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಅವರಿಗೆ ತಮ್ಮ ಸಹೋದರ ಡಿಕೆ ಸುರೇಶ್​ರನ್ನು ಗೆಲ್ಲಿಸುವ ಉಮ್ಮೇದಿ. ಬೆಂಗಳೂರು ಮಳೆ, ಜನರ ತಾಪತ್ರಯ? ಮತ್ತೊಂದು ಹೇಳಿಕೆ ನೀಡಿದರಾಯ್ತು!

ಬೆಂಗಳೂರು: ಇದನ್ನು ಬೆಂಗಳೂರಿನ ನಿವಾಸಿಗಳು ಡಬಲ್ ರೋಡ್ ಅನ್ನುತ್ತಾರೆ. ಸಿಂಗಲ್ ರೋಡೇ ಕಾಣಿಸ್ತಿಲ್ಲ, ಡಬಲ್ ರೋಡ್ ಎಲ್ಲಿ ಸ್ವಾಮಿ ಅಂತ ನಿಮ್ಮ ಪ್ರಶ್ನೆಯಾಗಿರಬಹುದು. ಇದನ್ನೇ ಬೆಂಗಳೂರು ನಗರದ ಮಹಿಮೆ ಅನ್ನೋದು. ಇವತ್ತು ಬೆಳಗ್ಗೆ ಬೆಂಗಳೂರಲ್ಲಿ ಸುರಿದ ಧಾರಾಕರ ಮಳೆಯಿಂದ ಉಂಟಾಗಿರುವ ಸ್ಥಿತಿ ಇದು. ಮೊನ್ನೆ ಮಾಧ್ಯಮಗಳ ಜೊತೆ ಮಾತಾಡುವಾಗ, ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಮಳೆ ಬರಲಿ, ನಾವು ಎದುರಿಸಲು ಸಿದ್ಧರಿದ್ದೇವೆ ಅಂದಿದ್ದರು. ಎಲ್ಲೀದ್ದೀರಿ ಸ್ವಾಮಿ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಜೆಡಿಎಸ್ ಮುಖಂಡರು ಇಷ್ಟು ದುರ್ಬಲರು ಅಂತ ಭಾವಿಸಿರಲಿಲ್ಲ: ಡಿಕೆ ಶಿವಕುಮಾರ್ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.