ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್ (Qnet) ಹಾಗೂ ವಿಹಾನ್ ದೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Vihaan Direct Selling India Private Limited) ವಿರುದ್ಧವಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿ ಸುದ್ದಿಗಳನ್ನು ಸಾರ್ವಜನಿಕ ವಲಯ ಹಾಗೂ ಮಾಧ್ಯಮದಲ್ಲಿ ಬಿತ್ತರಿಸಬಾರದು ಎಂದು ಬೆಂಗಳೂರಿನ ಮಾನ್ಯ ಸಿವಿಲ್ ನ್ಯಾಯಾಲಯವು ಹಣಕಾಸು ವಂಚನೆ ಸಂತ್ರಸ್ತರ ಕಲ್ಯಾಣ ಸಂಘದ (Financial Fraud Victims Welfare Association) ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಆದೇಶ ನೀಡಿದೆ.
ಬೆಂಗಳೂರು, ಮಾರ್ಚ್ 16: ಕ್ಯೂ ನೆಟ್ (Qnet) ಹಾಗೂ ವಿಹಾನ್ ದೈರೆಕ್ಟ್ ಸೆಲ್ಲಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ (Vihaan Direct Selling India Private Limited) ವಿರುದ್ಧವಾಗಿ ಯಾವುದೇ ರೀತಿಯ ಸುಳ್ಳು ಮಾಹಿತಿ ಸುದ್ದಿಗಳನ್ನು ಸಾರ್ವಜನಿಕ ವಲಯ ಹಾಗೂ ಮಾಧ್ಯಮದಲ್ಲಿ ಬಿತ್ತರಿಸಬಾರದು ಎಂದು ಬೆಂಗಳೂರಿನ ಮಾನ್ಯ ಸಿವಿಲ್ ನ್ಯಾಯಾಲಯವು ಹಣಕಾಸು ವಂಚನೆ ಸಂತ್ರಸ್ತರ ಕಲ್ಯಾಣ ಸಂಘದ (Financial Fraud Victims Welfare Association) ವಿರುದ್ಧ ತಾತ್ಕಾಲಿಕ ತಡೆಯಾಜ್ಞೆ ಆದೇಶ ನೀಡಿದೆ.
ವಿಹಾನ್ ಹಾಗೂ ಕ್ಯೂ ನೆಟ್ ಮೇಲೆ ಹಲವಾರು FIR ದಾಖಲಾದ ಬಗ್ಗೆ ಅಂದಿನ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಮಾಧ್ಯಮಗಳಿಗೆ ನೀಡಿದ್ದ ಮಾಹಿತಿ ಮೇರೆಗೆ ನಮ್ಮ ವಾಹಿನಿಯಲ್ಲಿ 31-3-2018 ರಂದು ಸುದ್ದಿ ಬಿತ್ತರಿಸಲಾಗಿತ್ತು. ಮಾನ್ಯ ಕರ್ನಾಟಕ ಹೈ ಕೋರ್ಟ್ ಸದರಿ FIR ಗಳನ್ನ ರದ್ದುಗೊಳಿಸಿ ಆದೇಶ ಹೊರಡಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿರುತ್ತೆ. ಇನ್ನು ಮುಂದೆ ದೃಢಪಡಿಸದ, ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡುವುದನ್ನು ನಿರ್ಬಂಧಿಸಲಾಗಿದೆ. TV9 ಕನ್ನಡವು ಈ ಹಿಂದೆ ಆದ ಅನಾನುಕೂಲಕ್ಕೆ ವಿಷಾದ ವ್ಯಕ್ತಪಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
