AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 ಎಫ್​ಐಆರ್: 8 ಮಂದಿ ಪೊಲೀಸ್ ವಶಕ್ಕೆ

ಬಸವನಗುಡಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ 3 ಎಫ್​ಐಆರ್: 8 ಮಂದಿ ಪೊಲೀಸ್ ವಶಕ್ಕೆ

ರಾಚಪ್ಪಾಜಿ ನಾಯ್ಕ್
| Edited By: |

Updated on:Aug 27, 2026 | 7:33 AM

Share

ಬೆಂಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪುನೀತ್ ಕೆರೆಹಳ್ಳಿ ಬೆಂಬಲಿಗರ ವಿರುದ್ಧ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ದೂರು ನೀಡಿದ್ದಾರೆ.

ಬೆಂಗಳೂರು, ಆಗಸ್ಟ್ 27: ಬೆಂಗಳೂರಿನಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ನಡೆದ ಸಂಬಂಧ, ಬಸವನಗುಡಿ ಪೊಲೀಸ್ ಠಾಣೆಯಲ್ಲಿ 3 ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಒಟ್ಟು ಎಂಟು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪುನೀತ್ ಕೆರೆಹಳ್ಳಿ ಬೆಂಬಲಿಗರ ವಿರುದ್ಧ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ನೀಡಿರುವ ದೂರಿನಡಿ ಈ ಕ್ರಮ ಕೈಗೊಳ್ಳಲಾಗಿದೆ. ಈದ್ ಮಿಲಾದ್ ಆಚರಣೆಯ ಸಂದರ್ಭದಲ್ಲಿ ನಡೆದ ಘರ್ಷಣೆಯು ನಂತರ ಹೊಡೆದಾಟಕ್ಕೆ ತಿರುಗಿತ್ತು. ಮೆರವಣಿಗೆಯು ಕುಮಾರಸ್ವಾಮಿ ಲೇಔಟ್, ಕೋಣನಕುಂಟೆ, ಯರಬ್ ನಗರ ಮತ್ತು ಬನಶಂಕರಿ ಪ್ರದೇಶಗಳಿಂದ ಹೊರಟು ಎನ್.ಆರ್. ರಸ್ತೆ ಮೂಲಕ ವೈಎಂಸಿಎ ಕಡೆಗೆ ಸಾಗುತ್ತಿತ್ತು. ಅಂದಾಜು ಸಂಜೆ 3:45 ರಿಂದ 4 ಗಂಟೆಯ ಸಮಯದಲ್ಲಿ ಪೊಲೀಸರಿಗೆ 112ಕ್ಕೆ ಕರೆ ಬಂದಿದ್ದು, ಕೆಲವರು ರಸ್ತೆಯನ್ನು ತಡೆದಿದ್ದಾರೆ ಎಂದು ತಿಳಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೊದಲನೆಯದಾಗಿ ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪ, ಗುಂಪುಗಳ ನಡುವೆ ಶತ್ರುತ್ವ ಆರೋಪದಡಿ ಪುನೀತ್ ಕೆರೆಹಳ್ಳಿ, ಗೋಪಿ ಗೌಡ, ಪುನೀತ್ ಗೌಡ, ವಿನೋದ್ ನಟಯಕ್ ಹಾಗೂ ಮತ್ತಿತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎರಡನೇಯದಾಗಿ, ಕೊಲೆ ಯತ್ನ ಹಾಗೂ ಎಸ್​ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಕಮಲ್ ಪಾಷಾ, ಅಬೂಬಕರ್ ಸಿದ್ದೀಕ್, ಸೈಯದ್ ಅನಾಸ್ ಎಂಬುವವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಮೂವರನ್ನ ಬಂಧಿಸಿ ತನಿಖೆ ನಡೆಸಲಾಗುತ್ತಿದ್ದು, ಮೂವರು ಅಪ್ರಾಪ್ತರನ್ನೂ ವಶಕ್ಕೆ ಪಡೆಯಲಾಗಿದೆ.

ಮೂರನೇಯದಾಗಿ, ಸಾರ್ವಜನಿಕ ರಸ್ತೆ ತಡೆ ಹಾಗೂ ಸಂಚಾರಕ್ಕೆ ಅಡ್ಡಿ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ಘಟನೆ ಸ್ಥಳದಲ್ಲಿದ್ದ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸದ್ಯ ಘಟನೆ ಸ್ಥಳದಲ್ಲಿ ಪೊಲೀಸರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಕೆಎಸ್​ಆರ್​ಪಿ ತುಕಡಿ ನಿಯೋಜಿಸಿ ಬಂದೋಬಸ್ತ್ ಮಾಡಲಾಗಿದೆ. ಅಲ್ಲದೇ ಸ್ಥಳೀಯ ಪೊಲೀಸರಿಂದ ಗಸ್ತು ಮುಂದುವರಿಕೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ದೌಡಾಯಿಸಿದ್ದರು. ಪ್ರಸ್ತುತ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ತಿಳಿಯುವ ಪ್ರಯತ್ನ ನಡೆದಿದೆ. ಎರಡೂ ಕಡೆಯಿಂದಲೂ ದೂರುಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸವನಗುಡಿಯಲ್ಲಿ ಈದ್ ಮೆರವಣಿಗೆ ವೇಳೆ ಘರ್ಷಣೆ ಸಂಬಂಧ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

Published on: Aug 27, 2026 07:09 AM

Follow Us