ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಾಗಿ ರಾಜಧಾನಿ ಜನರ ಕ್ಯೂ!
ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್ಗಳಿಗಾಗಿ ಜನರು ಅರ್ಧ ಕಿಲೋಮೀಟರ್ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30 ರಿಂದಲೇ ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಸಪ್ಲೈ ಆಗಿಲ್ಲ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು 10 ರಿಂದ 24 ದಿನಗಳವರೆಗೆ ಸಿಲಿಂಡರ್ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆಹಾರ ಸಚಿವ ಮುನಿಯಪ್ಪ , ಗ್ಯಾಸ್ ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲಬೇಡಿ, ಮನೆಬಾಗಿಲಿಗೆ ಸಿಲಿಂಡರ್ ತಲುಪಿಸಲಾಗುವುದು ಎಂದು ಹೇಳಿದರೂ, ವಾಸ್ತವದಲ್ಲಿ ಬೆಂಗಳೂರಿನ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿರವಂತೆ ಕಾಣುತ್ತಿದೆ.
ಬೆಂಗಳೂರು, ಮಾರ್ಚ್ 24: ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್ಗಳಿಗಾಗಿ ಜನರು ಅರ್ಧ ಕಿಲೋಮೀಟರ್ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30 ರಿಂದಲೇ ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಸಪ್ಲೈ ಆಗಿಲ್ಲ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು 10 ರಿಂದ 24 ದಿನಗಳವರೆಗೆ ಸಿಲಿಂಡರ್ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆಹಾರ ಸಚಿವ ಮುನಿಯಪ್ಪ , ಗ್ಯಾಸ್ ಏಜೆನ್ಸಿಗಳ ಮುಂದೆ ಕ್ಯೂ ನಿಲ್ಲಬೇಡಿ, ಮನೆಬಾಗಿಲಿಗೆ ಸಿಲಿಂಡರ್ ತಲುಪಿಸಲಾಗುವುದು ಎಂದು ಹೇಳಿದರೂ, ವಾಸ್ತವದಲ್ಲಿ ಬೆಂಗಳೂರಿನ ಪರಿಸ್ಥಿತಿ ಇದಕ್ಕೆ ವಿರುದ್ಧವಾಗಿರವಂತೆ ಕಾಣುತ್ತಿದೆ.
ಸಿಲಿಂಡರ್ ವಿತರಣಾ ಏಜೆನ್ಸಿಯ ಹೇಳುವಂತೆ 5000 ಬುಕಿಂಗ್ಗಳಿಗೆ ಕೇವಲ 300-500 ಸಿಲಿಂಡರ್ಗಳು ಬರುತ್ತಿವೆ. ಇದಕ್ಕೆ “ಪ್ಯಾನಿಕ್ ಬುಕಿಂಗ್” ಕಾರಣ ಎಂದು ಹೇಳಲಾಗುತ್ತಿದೆ. ಸರ್ಕಾರವು ದೇಶೀಯ ಸಿಲಿಂಡರ್ಗಳಿಗೆ ಯಾವುದೇ ಕೊರತೆ ಇಲ್ಲ ಎಂದು ಹೇಳುತ್ತಿದ್ದರೂ, ಬೆಂಗಳೂರಿನಲ್ಲಿ ಜನರು ತಮ್ಮ ದೈನಂದಿನ ಕಾರ್ಯಗಳನ್ನು ಬಿಟ್ಟು ಸಿಲಿಂಡರ್ಗಳಿಗಾಗಿ ಕಾಯುತ್ತಿದ್ದಾರೆ. OTP ಬಂದಿದ್ದರೂ ಸಿಲಿಂಡರ್ ಸಿಗದಂತಹ ಪ್ರಕರಣಗಳು ವರದಿಯಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಲಾಲ್ ಬಾಗ್ ಫ್ಲವರ್ ಶೋನಲ್ಲಿ ಬಿಗ್ ಬಾಸ್ ಸೆಲ್ಫಿ ಝೋನ್; ಏನಿದರ ವಿಶೇಷ?
ನಿವೃತ್ತ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗೆ ಗುಡ್ನ್ಯೂಸ್: ವಿಡಿಯೋ ನೋಡಿ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?

