ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಶುರು: ಜಯನಗರದ ಅಶೋಕ ಪಿಲ್ಲರ್​ನಿಂದ ಫುಟ್​ಪಾತ್​ ತೆರವು ಕಾರ್ಯಾಚರಣೆ ಆರಂಭ

Updated on: Jul 01, 2026 | 11:03 AM

ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರಿನಲ್ಲಿ ವ್ಯಾಪಕ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭಿಸಿದೆ. ಜಯನಗರದ ಅಶೋಕ ಪಿಲ್ಲರ್‌ನಿಂದ ಕಾರ್ಯಾಚರಣೆ ಪ್ರಾರಂಭವಾಗಿದ್ದು, ಪಾದಚಾರಿಗಳ ಅನುಕೂಲಕ್ಕಾಗಿ ಅಂಗಡಿಗಳು ಮತ್ತು ಕಟ್ಟಡ ಸಾಮಗ್ರಿಗಳ ಒತ್ತುವರಿಯನ್ನು ತೆರವುಗೊಳಿಸಲಾಗುತ್ತಿದೆ. ಈಗಿನ ಕಾರ್ಯಾಚರಣೆ ಬಗ್ಗೆ ಮುಂಚಿತವಾಗಿಯೇ ನೋಟಿಸ್ ನೀಡಲಾಗಿದ್ದು, ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲಾಗುತ್ತಿದೆ.

ಬೆಂಗಳೂರು, ಜುಲೈ 1: ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರು ನಗರದಾದ್ಯಂತ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದೆ. ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಬುಧವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂಗಡಿಗಳು ಮತ್ತು ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ವಸ್ತುಗಳಿಂದ ಒತ್ತುವರಿ ಮಾಡಲಾಗಿದ್ದ ಫುಟ್​ಪಾತ್‌ಗಳನ್ನು ತೆರವುಗೊಳಿಸಲಾಗುತ್ತಿದೆ.

ಬೆಳಗ್ಗೆ 9:30ಕ್ಕೆ ಶುರುವಾದ ಈ ಕಾರ್ಯಾಚರಣೆಗೆ ಜೆಸಿಬಿಗಳನ್ನು ಬಳಸಲಾಗುತ್ತಿದೆ. ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರ ಬೆಂಗಾವಲು ಸಹ ಒದಗಿಸಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 153 ರಲ್ಲಿ, ಅಶೋಕ ಪಿಲ್ಲರ್‌ನಿಂದ ಮಾಧವನ್ ಪಾರ್ಕ್‌ವರೆಗೆ ಈ ತೆರವು ನಡೆಯುತ್ತಿದೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ, ಭವಿಷ್ಯದಲ್ಲಿ ಮತ್ತೆ ಒತ್ತುವರಿ ಮಾಡದಂತೆ ನಿಗಾ ವಹಿಸಲು ಜಿಬಿಎ ಎಚ್ಚರಿಕೆ ವಹಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us