ಧಾರಾಕಾರ ಮಳೆಗೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತ
ಸಂಜೆ ಹೊತ್ತಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ಪ್ರತಿ ಬಾರಿ ಮಳೆ ಬಂದಾಗ ಈ ರಸ್ತೆ ಜಲಾವೃತವಾಗಲಿದ್ದು, ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ.
ಆನೇಕಲ್, ಅಕ್ಟೋಬರ್ 03: ಸಂಜೆ ಸುರಿದ ಧಾರಾಕಾರ ಮಳೆಗೆ (Rain) ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡಿದೆ. ರಸ್ತೆಯಲ್ಲಿ ನೀರುನಿಂತ ಪರಿಣಾಮ ಕೆರೆಯಂತೆ ಮಾರ್ಪಟ್ಟಿದ್ದು, ಸಂಚರಿಸಲಾಗದೆ ವಾಹನ ಸವಾರರು ಪರದಾಟ ನಡೆಸಿದ್ದಾರೆ. ಪ್ರತಿ ಬಾರಿ ಮಳೆ ಬಂದಾಗ ಈ ರಸ್ತೆ ಜಲಾವೃತವಾಗಲಿದ್ದು, ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಮಾಡದ ಕಾರಣ ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಾಹನ ಸವಾರರು ಕಿಡಿ ಕಾರಿದ್ದಾರೆ. ವಾಹನಗಳು ಸಂಚರಿಸಲಾಗದ ಕಾರಣ, ಹೆದ್ದಾರಿಯಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಕಂಡುಬಂತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.