ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

Edited By:

Updated on: May 08, 2026 | 3:01 PM

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಜಿಗಣಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ. ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ಇಬ್ಬರು ಬಿಹಾರ ಮೂಲದ ಆರೋಪಿಗಳನ್ನು ಬಂಧಿಸಲಾಗಿದ್ದು, ಪೌಲ್ಟ್ರಿ ಫೀಡ್ಸ್ ವಾಹನದಲ್ಲಿ ಒಡಿಶಾದಿಂದ ಗಾಂಜಾ ಸಾಗಿಸಲಾಗುತ್ತಿತ್ತು. ಪ್ರಮುಖ ಆರೋಪಿಗಳಿಗಾಗಿ ಶೋಧ ಮುಂದುವರಿದಿದೆ.

ಆನೇಕಲ್, ಮೇ 08: 1 ಕೋಟಿ 25 ಲಕ್ಷ ರೂಪಾಯಿ ಮೌಲ್ಯದ 250 ಕೆಜಿ ಗಾಂಜಾವನ್ನು ಜಪ್ತಿ ಮಾಡುವ ಮೂಲಕ ಜಿಗಣಿ ಪೊಲೀಸರು ಭರ್ಜರಿ ಬೇಟೆ ಆಡಿದ್ದಾರೆ. ಸಿನಿಮಾ ಶೈಲಿಯಲ್ಲಿ ಗಾಂಜಾ ಸಾಗಿಸಿದ್ದ ಬಿಹಾರ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ರಾಮಾಯಣ್ ಯಾದವ್(56) ಮತ್ತು ಸಬೀರ್(51) ಬಂಧಿತರು. ಕಿಡಿಗೇಡಿಗಳು ಯಾರಿಗೂ ತಿಳಿಯದಂತೆ ಒಡಿಶಾದಿಂದ ಪೌಲ್ಟ್ರಿ ಫೀಡ್ಸ್ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದರು. ಈ ವೇಳೆ ಜಿಗಣಿ ಇನ್ಸ್‌ಪೆಕ್ಟರ್‌ ಮಂಜುನಾಥ್ ನೇತೃತ್ವದ ತಂಡದಿಂದ ಬೇಗೂರು ಮುಖ್ಯರಸ್ತೆಯ ಕೊಪ್ಪ ಬಳಿ ದಾಳಿ ಮಾಡಿ, ಇಬ್ಬರನ್ನು ಬಂಧಿಸಿದ್ದಾರೆ. ಇನ್ನು ಪ್ರಮುಖ ಆರೋಪಿ ಬಿನೋದ್ ಸಿಂಗ್ ಮತ್ತು ಬಾಬುಗಾಗಿ ಶೋಧ ನಡೆಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಬೆಂಗಳೂರು ಗ್ರಾಮಾಂತರ ಎಸ್​ಪಿ ಚಂದ್ರಕಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 08, 2026 02:59 PM
Loading...
Unable to load recommendations.
Follow Us