AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ತುಳುಕುತ್ತಿರುವ ಬೆಂಗಳೂರು ಏರ್​ಪೋರ್ಟ್​ ಟರ್ಮಿನಲ್ 1: ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯದಿಂದ ಪ್ರಯಾಣಿಕರ ಪರದಾಟ

ತುಂಬಿ ತುಳುಕುತ್ತಿರುವ ಬೆಂಗಳೂರು ಏರ್​ಪೋರ್ಟ್​ ಟರ್ಮಿನಲ್ 1: ಇಂಡಿಗೋ ವಿಮಾನ ಸಂಚಾರದಲ್ಲಿ ವ್ಯತ್ಯಯದಿಂದ ಪ್ರಯಾಣಿಕರ ಪರದಾಟ

ನವೀನ್ ಕುಮಾರ್ ಟಿ
| Edited By: |

Updated on: Dec 04, 2025 | 7:13 AM

Share

‘ಥರ್ಡ್ ಪಾರ್ಟಿ ಸಿಸ್ಟಂ’ ದೋಷದಿಂದ ಚೆಕ್-ಇನ್ ವ್ಯತ್ಯಯ ಉಂಟಾಗಿ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ಸಮಯದಲ್ಲಿ ವಿಳಂಬವಾಗಿದ್ದಾಯ್ತು. ಇದೀಗ ಇಂಡಿಗೋ ಏರ್​ಲೈನ್ಸ್ ವಿಮಾನ ಸಂಚಾರದಲ್ಲಿ ನಿರಂತರ ವ್ಯತ್ಯಯ ಉಂಟಾಗುತ್ತಿದೆ. ಇದರಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟರ್ಮಿನಲ್ ಒಂದರಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಡಿಸೆಂಬರ್ 4: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಳೆದ ಎರಡು ದಿನಗಳಿಂದ ಇಂಡಿಗೋ ಏರ್​ಲೈನ್ಸ್ ವಿಮಾನ ಸಂಚಾರದಲ್ಲಿ ನಿರಂತರ ವ್ಯತ್ಯಯ ಉಂಟಾಗುತ್ತಿದ್ದು, ಪ್ರಯಾಣಿಕರು ಪರದಾಟ ಪಡುವಂತಾಗಿದೆ. ಇಂಡಿಗೋ ವಿಮಾನಗಳಲ್ಲಿ ಪೈಲಟ್ ಹಾಗೂ ಸಿಬ್ಬಂದಿ ಕೊರತೆ ಕಂಡುಬಂದಿರುವುದೇ ಈ ಸ್ಥಿತಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಇದರಿಂದ ಹಲವು ವಿಮಾನಗಳ ಡಿಪಾರ್ಚರ್ ವೇಳಾಪಟ್ಟಿಯಲ್ಲಿ ಅನಿಯಮಿತ ಬದಲಾವಣೆ, ಗಂಟೆಗಟ್ಟಲೆ ವಿಳಂಬ, ಕೆಲವು ಸಂದರ್ಭದಲ್ಲಿ ಬೋರ್ಡಿಂಗ್ ಪ್ರಕ್ರಿಯೆಗೂ ತೊಂದರೆ ಎದುರಾದ ಘಟನೆಗಳು ವರದಿಯಾಗಿವೆ. ಟರ್ಮಿನಲ್ 1ರಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗಿದ್ದು, ಡಿಪಾರ್ಚರ್ ಗೇಟ್‌ ಬಳಿ ಪ್ರಯಾಣಿಕರು ಕುಳಿತುಕೊಳ್ಳಲು ಜಾಗವೇ ಸಿಗದಷ್ಟು ಇಕ್ಕಟ್ಟು ಉಂಟಾಯಿತು. ಗೇಟ್‌ಗಳ ಬಳಿ ಜನಸಂದಣಿ ಹೆಚ್ಚಾದ ಕಾರಣ, ಪ್ರಯಾಣಿಕರು ನೆಲದಲ್ಲೇ ಕೂತು ವಿಶ್ರಾಂತಿ ಪಡೆಯುವಂತ ಪರಿಸ್ಥಿತಿ ನಿರ್ಮಾಣವಾಯಿತು.

ವಿಮಾನ ವಿಳಂಬದಿಂದ ಏರ್‌ಪೋರ್ಟ್‌ನಲ್ಲಿ ಅತಿಯಾದ ಪ್ರಯಾಣಿಕರ ದಟ್ಟಣೆ ಉಂಟಾಗಿದ್ದು, ಏರ್‌ಪೋರ್ಟ್ ಸಿಬ್ಬಂದಿಗೂ ನಿಯಂತ್ರಣ ಕಷ್ಟವಾಗಿದೆ. ಪ್ರಯಾಣಿಕರು ಇಂಡಿಗೋ ಏರ್‌ಲೈನ್ಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಗಂಟೆಗಟ್ಟಲೇ ಕಾಯುತ್ತಿದ್ದೇವೆ, ಯಾವುದೇ ಸ್ಪಷ್ಟ ಮಾಹಿತಿ ಕೊಡುತ್ತಿಲ್ಲ, ಇದು ಏರ್‌ಲೈನ್‌ನ ನಿರ್ಲಕ್ಷ್ಯ’ ಎಂದು ಹಲವು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂಡಿಗೋ ಏರ್​ಲೈನ್ಸ್ ಕಡೆಯಿಂದ ಅಧಿಕೃತ ಪ್ರತಿಕ್ರಿಯೆ ಇನ್ನೂ ಲಭ್ಯವಾಗಿಲ್ಲ. ವಿಮಾನ ಸಂಚಾರ ಸಾಮಾನ್ಯ ಸ್ಥಿತಿಗೆ ಮರಳಲು ಇನ್ನಷ್ಟು ಸಮಯ ಹಿಡಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More