ಬೆಂಗಳೂರು, ಅಕ್ಟೋಬರ್ 18: ಮಳೆ ಬಂದರೆ ಸಾಕು ಬೆಂಗಳೂರಿನಲ್ಲಿ ಯಮರೂಪಿ ರಸ್ತೆ ಗುಂಡಿಗಳು ಪ್ರತ್ಯಕ್ಷವಾಗುತ್ತವೆ. ನಗರದ ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್ನಲ್ಲಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಮಳೆ ಬಂದು ಬಿಡುತ್ತಿದ್ದಂತೆಯೇ ಅನೇಕ ರಸ್ತೆಗುಂಡಿಗಳು ಪ್ರತ್ಯಕ್ಷವಾಗಿವೆ. ದಿನಕ್ಕೆ ಸಾವಿರಾರು ಬಿಎಂಟಿಸಿ ಬಸ್ಗಳು ಇಲ್ಲಿ ಓಡಾಡುತ್ತವೆ. ವಾಹನ ಸವಾರರು ಹಾಗೂ ಬಸ್ನಲ್ಲಿ ಪ್ರಯಾಣಿಸುವ ಜನರಿಗೂ ರಸ್ತೆ ಗುಂಡಿಗಳಿಂದ ತೊಂದರೆಯಾಗುತ್ತಿದೆ.
ಗುಂಡಿಯಲ್ಲಿ ವಾಹನ ಚಲಾಯಿಸುವ ಕಾರಣ ಬಸ್ಗಳ ಆಕ್ಸಲ್ ಕಟ್ ಆಗುತ್ತವೆ. ಜೊತೆಗೆ ವಯಸ್ಸಾದ ಸವಾರರಿಗೂ ಬೆನ್ನು ನೋವಿನಂತಹ ಸಮಸ್ಯೆಗಳು ಹೆಚ್ಚಾಗಲು ರಸ್ತೆ ಗುಂಡಿಗಳು ಕಾರಣವಾಗುತ್ತಿವೆ. ಇಷ್ಟಾದರೂ ಬಿಬಿಎಂಪಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ