ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ರಾತ್ರಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ಕಂತಸ್ತಿನ ಕಟ್ಟಡ ಸಂಪೂರ್ಣ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಕಟ್ಟಡದ ಕೆಳಭಾಗದಲ್ಲಿದ್ದ ಹೆಲ್ಮೆಟ್ ಮತ್ತು ಮೊಬೈಲ್ ಅಂಗಡಿಗಳು ಬೆಂಕಿಗಾಹುತಿಯಾಗಿವೆ. ಅದೃಷ್ಟವಶಾತ್, ನಿವಾಸಿಗಳನ್ನು ಸಕಾಲದಲ್ಲಿ ಸ್ಥಳಾಂತರಿಸಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಬೆಂಗಳೂರು, ಸೆಪ್ಟೆಂಬರ್ 19: ಸುಧಾಮ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ರಾತ್ರಿ ಸಂಭವಿಸಿದ ಈ ಘಟನೆಯಲ್ಲಿ, ನಾಲ್ಕಂತಸ್ತಿನ ಕಟ್ಟಡವೊಂದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅವಘಡ ಸಂಭವಿಸಿದ ಕಟ್ಟಡದ ಕೆಳಮಹಡಿಯಲ್ಲಿ ಹೆಲ್ಮೆಟ್ ಮತ್ತು ಮೊಬೈಲ್ ಅಂಗಡಿಗಳಿದ್ದು, ಅವುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಮೇಲಿನ ಮಹಡಿಗಳಲ್ಲಿ ವಾಸಸ್ಥಳಗಳಿದ್ದವು. ಬೆಂಕಿ ಕಾಣಿಸಿಕೊಂಡ ತಕ್ಷಣ, ಕಟ್ಟಡದಲ್ಲಿದ್ದ ನಿವಾಸಿಗಳು ತಮ್ಮ ಜೀವ ಉಳಿಸಿಕೊಳ್ಳಲು ತಕ್ಷಣವೇ ಹೊರಗೋಡಿ ಬಂದಿದ್ದಾರೆ. ಅದೃಷ್ಟವಶಾತ್, ಈ ದೊಡ್ಡ ಮಟ್ಟದ ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos

