AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಧ್ಯರಾತ್ರಿ ಮನೆ ಬಾಗಿಲು ಬಡಿದು ನಗ್ನ ಕಾಮುಕನಿಂದ ದಾಂಧಲೆ, ಬೆಚ್ಚಿಬಿದ್ದ ತಾಯಿ-ಮಗಳು

ಬೆಂಗಳೂರು: ಮಧ್ಯರಾತ್ರಿ ಮನೆ ಬಾಗಿಲು ಬಡಿದು ನಗ್ನ ಕಾಮುಕನಿಂದ ದಾಂಧಲೆ, ಬೆಚ್ಚಿಬಿದ್ದ ತಾಯಿ-ಮಗಳು

ನವೀನ್ ಕುಮಾರ್ ಟಿ
| Edited By: |

Updated on: Sep 09, 2025 | 11:33 AM

Share

ಕಾಮುಕನೊಬ್ಬ ಬೆತ್ತಲೆಯಾಗಿ ಮಹಿಳೆಯರಿಬ್ಬರೇ ಇರುವ ಮನೆ ಬಾಗಿಲು ಬಡಿದು ಮಧ್ಯರಾತ್ರಿ ಮಧ್ಯರಾತ್ರಿ ದಾಂಧಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ ಸಿಸಿಟಿವಿ ದೃಶ್ಯ ಭಯ ಹುಟ್ಟಿಸುವಂತಿದೆ. ಚೀಮಸಂದ್ರದ ಕೆಆರ್ ಡಿಪೇನ್ಸ್ ಬಡಾವಣೆಯಲ್ಲಿ ಸೆಪ್ಟೆಂಬರ್ 3 ರಂದು ಘಟನೆ ನಡೆದಿದ್ದು, ಸ್ಥಳೀಯರು ಕಾಮುಕನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 9: ಕಾಮುಕನೊಬ್ಬ ನಗ್ನನಾಗಿ ಮಧ್ಯರಾತ್ರಿ ವೇಳೆ ಮಹಿಳೆಯರಿಬ್ಬರೇ ಇದ್ದ ಮನೆ ಬಾಗಿಲು ಬಡಿದು ದಾಳಿ ಮಾಡಲು ಯತ್ನಿಸಿದ ಘಟನೆ ಬೆಂಗಳೂರು ಪೂರ್ವ ತಾಲೂಕಿನ ಚೀಮಸಂದ್ರದ ಕೆಆರ್ ಡಿಪೇನ್ಸ್ ಬಡಾವಣೆಯಲ್ಲಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್ 3 ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೈಯಲ್ಲಿ ಗುದ್ದಲಿಯಿಡಿದು ಬಂದು ಜೆಸ್ಸಿ ಎಂಬುವವರ ಮನೆ ಬಳಿ ತಡರಾತ್ರಿ ದಾಂಧಲೆ ಮಾಡಿದ್ದ ಕಾಮುಕ, ಬಳಿಕ ಮನೆ ಬಾಗಿಲು ಬಡಿದಿದ್ದಾನೆ. ಅಲ್ಲದೆ, ಮಗಳನ್ನು ರೇಪ್ ಮಾಡುವುದಾಗಿ ದಮ್ಕಿ ಹಾಕಿದ್ದಾನೆ. ಮನೆಯ ಬಾಗಿಲು ತೆಗೆಯದಿದಕ್ಕೆ ಕಾರಿನ ಗ್ಲಾಸ್ಗಳನ್ನೆಲ್ಲ‌ ಒಡೆದು ಹಾಕಿದ್ದಾನೆ. ಅಷ್ಟರಲ್ಲಿ ಮನೆಯ ಹಿಂದಿನ ಡೋರ್ ಮೂಲಕ ಹೊರಗಡೆ ಕೇಳಿಸುವಂತೆ ಮಹಿಳೆ ಕಿರುಚಾಡಿದ್ದರು. ಬಳಿಕ ಸ್ಥಳೀಯರು ರಕ್ಷಣೆಗೆ ದಾವಿಸಿದ್ದರು. ನಂತರ ಬೆತ್ತಲೆ ಕಾ‌ಮುಕನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದರು. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More