AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ

ಬೆಂಗಳೂರು: ಇಡೀ ಮೊಬೈಲ್​ ಅಂಗಡಿಯನ್ನೇ ದೋಚಿದ ಖದೀಮರು! ವಿಡಿಯೋ ನೋಡಿ

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Dec 16, 2024 | 8:44 AM

Share

ಶಿವಾಜಿನಗರದ ವಿಶ್ವಾಸ್ ಕಮ್ಯೂನಿಕೇಷನ್ ಎಂಬ ಮೊಬೈಲ್ ಅಂಗಡಿಯನ್ನು ದರೋಡೆ ಮಾಡಲಾಗಿದೆ. ದರೋಡೆಕೋರರು 55 ಮೊಬೈಲ್ ಫೋನ್‌ಗಳು ಮತ್ತು 2 ಲಕ್ಷ ರೂಪಾಯಿ ನಗದನ್ನು ಕಳವು ಮಾಡಿದ್ದಾರೆ. ಸಿಸಿಟಿವಿ ದೃಶ್ಯಗಳು ದರೋಡೆಯನ್ನು ದೃಢೀಕರಿಸುತ್ತವೆ ಮತ್ತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು, ಡಿಸೆಂಬರ್​ 16: ಶಿವಾಜಿನಗರದ ವಿಶ್ವಾಸ್ ಕಮ್ಯೂನಿಕೆಷನ್ ಎಂಬ ಹೆಸರಿನ ಮೊಬೈಲ್ ಅಂಗಡಿಯನ್ನು ಖತರ್ನಾಕ್ ಖದೀಮರು ದೋಚಿದ್ದಾರೆ. ಖದೀಮರು ಎರಡು ಲಕ್ಷ ರೂಪಾಯಿ ನಗದು ಹಾಗೂ ಮೂರು ಲಕ್ಷ ಮೌಲ್ಯದ 55 ಮೊಬೈಲ್ ಫೋನ್​ಗಳನ್ನು ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾರೆ. ಅಂಗಡಿ ದೋಚುವ ದೃಶ್ಯ ಸಿಸಿ ಟಿವಿ ಕ್ಯಾಮೆರದಲ್ಲಿ ಸೆರೆಯಾಗಿದೆ.

ಡಿಸೆಂಬರ್ 11ರ ಬೆಳಗಿನ ಜಾವ 3.25ರ ಸುಮಾರಿಗೆ ಶೆಟರ್ ಮುರಿದು ಒಳಗೆ ನುಗ್ಗಿದ ಇಬ್ಬರು ಮಾಸ್ಕ್ ಧರಿಸಿದ ವ್ಯಕ್ತಿಗಳು ಅಂಗಡಿಯಲ್ಲಿದ್ದ ಸುಮಾರು 55 ಮೊಬೈಲ್ ಫೋನ್​ಗಳನ್ನು ಚೀಲಕ್ಕೆ ತುಂಬಿಕೊಂಡಿದ್ದಾರೆ. ಬಳಿಕ ಡ್ರಾನಲ್ಲಿ ಇಟ್ಟಿದ್ದ ಎರಡು ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ಪ್ರದೀಪ್​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.