AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ

ಭಾವನಾ ಹೆಗಡೆ
|

Updated on: Jan 05, 2026 | 1:09 PM

Share

ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಹಿಂಸಾತ್ಮಕ ಘಟನೆಯ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಜೆ.ಜೆ. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ದೇವಿಯ ರಥದ ಮೇಲೆ ಕಲ್ಲು ಎಸೆದ ಘಟನೆಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, ಜನವರಿ 05: ಬೆಂಗಳೂರಿನ ಜೆಜೆ ನಗರದಲ್ಲಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಇಬ್ಬರು ಯುವತಿಯರು ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿತ್ತು. ಈ ಹಿಂಸಾತ್ಮಕ ಘಟನೆಯ ನಂತರ ಸಚಿವ ಜಮೀರ್ ಅಹ್ಮದ್ ಖಾನ್ ಜೆ.ಜೆ. ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ದೇವಿಯ ರಥದ ಮೇಲೆ ಕಲ್ಲು ಎಸೆದ ಘಟನೆಗೆ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ.

ಕೇವಲ ಅಪ್ರಾಪ್ತರು ಮಾತ್ರ ಈ ಕೃತ್ಯ ನಡೆಸಿದ್ದಾರೆ ಎನ್ನುವುದನ್ನು ನಂಬಲು ಸಾಧ್ಯವಿಲ್ಲವೆಂದ ಜಮೀರ್, ಈ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚುವಂತೆ ಡಿಸಿಪಿಗೆ ಆದೇಶಿಸಲಾಗಿದೆ. ಚಾಮರಾಜಪೇಟೆಯಲ್ಲಿ ಹಿಂದೂ–ಮುಸ್ಲಿಂರು ಸಹೋದರರಂತೆ ಬದುಕುತ್ತಿದ್ದು, ಈ ರೀತಿಯ ಘಟನೆ ಹಿಂದೆ ನಡೆದಿಲ್ಲ. ಈ ಪ್ರದೇಶದಲ್ಲಿ ಗಾಂಜಾ ಸಮಸ್ಯೆ ಸ್ವಲ್ಪ ಮಟ್ಟಿಗೆ ಹೆಚ್ಚಿರುವುದು ಸತ್ಯವಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ತಪ್ಪು ಮಾಡಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More