ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ ತಮ್ಮ ಗರ್ಭಿಣಿ ಸಹೋದ್ಯೋಗಿ ಉಮಾಗೆ ಠಾಣೆಯಲ್ಲೇ ಅದ್ಧೂರಿ ಸೀಮಂತ ಆಯೋಜಿಸಿದರು. ಅರಶಿನ, ಕುಂಕುಮ, ಫಲ ತಾಂಬೂಲ ನೀಡಿ, ಹಸಿರು ಬಳೆ ತೊಡಿಸಿ ಶುಭ ಹಾರೈಸಿದರು. ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದು ಠಾಣೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.
ಬೆಂಗಳೂರು, ಡಿಸೆಂಬರ್ 14: ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಸಿಬ್ಬಂದಿ, ಗರ್ಭಿಣಿ ಸಹೋದ್ಯೋಗಿ ಉಮಾಗೆ ಠಾಣೆಯಲ್ಲೇ ಅದ್ಧೂರಿ ಸೀಮಂತ ಕಾರ್ಯ ಮಾಡಿದ್ದಾರೆ. ಅರಶಿನ, ಕುಂಕುಮ, ಫಲ ತಾಂಬೂಲ ನೀಡಿ, ಹಸಿರು ಬಳೆ ತೊಡಿಸಿ ಶುಭ ಶಾಸ್ತ್ರೋಕ್ತವಾಗಿ ಕಾರ್ಯಕ್ರಮ ನೆರವೇರಿಸಲಾಯಿತು. ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಇದು ಠಾಣೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿ, ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Latest Videos

