AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಗಂಗಾಧರ​ ಬ. ಸಾಬೋಜಿ
|

Updated on:Aug 10, 2025 | 12:10 PM

Share

ಬೆಂಗಳೂರಿನ ಕೆಎಸ್‍ಆರ್ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಹೊಸ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ಮಾರ್ಗಗಳಲ್ಲಿ ಈ ರೈಲುಗಳು ಸಂಚರಿಸಲಿವೆ. ರಾಜ್ಯಪಾಲರು, ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಬೆಂಗಳೂರು, ಆಗಸ್ಟ್​​ 10: ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಮೂರು ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಹಸಿರು ನಿಶಾನೆ ತೋರಿಸಿದರು. ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀಮಾತಾ ವೈಷ್ಣೋದೇವಿ ಕತ್ರಾ ಮತ್ತು ನಾಗಪುರ(ಅಜ್ನಿ)-ಪುಣೆ ವಂದೇ ಭಾರತ್​ ರೈಲಿಗೆ ಮೋದಿ ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಸೋಮಣ್ಣ, ಸಂಸದ ಪಿ.ಸಿ.ಮೋಹನ್, ಸಚಿವ ದಿನೇಶ್ ಗುಂಡೂರಾವ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾಗಿ ಆಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Aug 10, 2025 12:09 PM