ಜೂನ್ ತಿಂಗಳ ಮೊದಲ ದಿನವೇ ಬೆಂಗಳೂರಿನಲ್ಲಿ ಮಳೆ ಆರಂಭ; ವಾಹನ ಸವಾರರಿಗೆ ತೀವ್ರ ಸಂಕಷ್ಟ

|

Updated on: Jun 01, 2024 | 9:44 PM

ಜೂನ್ ತಿಂಗಳ ಮೊದಲ ದಿನವೇ ಮುಂಗಾರು ಮಳೆ ಆರಂಭವಾಗಿದ್ದು, ಬೆಂಗಳೂರಿನ ಯಶವಂತಪುರ, ವಸಂತನಗರ, ಶಾಂತಿ ನಗರ, ಹೆಬ್ಬಾಳ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಬನಶಂಕರಿ,ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿ ಹಲವೆಡೆ ಭರ್ಜರಿ ಮಳೆಯಾಗುತ್ತಿದೆ. ಮಳೆ ಆರ್ಭಟಕ್ಕೆ ಬೆಂಗಳೂರು ನಗರದ ವಿವಿಧೆಡೆ 32 ಮರಗಳು ಧರೆಗುರುಳಿವೆ. ಈ ಕುರಿತು ಬಿಬಿಎಂಪಿ ಕಂಟ್ರೋಲ್ ರೂಮ್​ನಲ್ಲಿ 32 ದೂರು ದಾಖಲಾಗಿದೆ. ಕೂಡಲೇ 18 ಕಡೆ ಬಿಬಿಎಂಪಿ ಸಿಬ್ಬಂದಿ ಮರ ತೆರವು ಮಾಡಿದ್ದಾರೆ.

ಬೆಂಗಳೂರು, ಜೂ.01: ಜೂನ್ ತಿಂಗಳ ಮೊದಲ ದಿನವೇ ಮುಂಗಾರು ಮಳೆ(Monsoon rain) ಆರಂಭವಾಗಿದ್ದು, ಬೆಂಗಳೂರಿನ ಯಶವಂತಪುರ, ವಸಂತನಗರ, ಶಾಂತಿ ನಗರ, ಹೆಬ್ಬಾಳ, ಸದಾಶಿವನಗರ, ರಾಜಾಜಿನಗರ, ವಿಜಯನಗರ, ಬನಶಂಕರಿ,ಮೆಜೆಸ್ಟಿಕ್, ಸಿಟಿ ಮಾರ್ಕೆಟ್ ಸೇರಿ ಹಲವೆಡೆ ಭರ್ಜರಿ ಮಳೆಯಾಗುತ್ತಿದೆ. ಇತ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲೂ ವರುಣನ ಆಗಮನವಾಗಿದ್ದು, ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ ಮಲ್ಲಸಂದ್ರ, ಸೇರಿದಂತೆ ಹಲವು ಕಡೆ ಮುಂಗಾರು ಮಳೆಯಾಗಿದೆ. ನಿರಂತರ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ವಾಹನ ಸವಾರರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಕೆಲವು ದಿನಗಳ ನಂತರ ಬೆಂಗಳೂರಿನಲ್ಲಿ ಮಳೆ ಆರ್ಭಟ ಶುರುವಾಗಿದ್ದು, ಬೆಂಗಳೂರು ನಗರದ ವಿವಿಧೆಡೆ 32 ಮರಗಳು ಧರೆಗುರುಳಿವೆ. ಈ ಕುರಿತು ಬಿಬಿಎಂಪಿ ಕಂಟ್ರೋಲ್ ರೂಮ್​ನಲ್ಲಿ 32 ದೂರು ದಾಖಲಾಗಿದೆ. ಕೂಡಲೇ 18 ಕಡೆ ಬಿಬಿಎಂಪಿ ಸಿಬ್ಬಂದಿ ಮರ ತೆರವು ಮಾಡಿದ್ದಾರೆ. ಇತ್ತ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಅತಂಕ ಎದುರಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us on