Bengaluru Rains: ಓಕಳೀಪುರ ರೈಲ್ವೆ ಅಂಡರ್​ಪಾಸ್​, ಪ್ಯಾಲೇಸ್ ರೋಡ್​ನಲ್ಲಿ ನೀರು ನಿಂತು ಜನರ ಪರದಾಟ

| Updated By: ಗಣಪತಿ ಶರ್ಮ

Updated on: Oct 15, 2024 | 11:36 AM

ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿಯಿಂದಲೇ ಸುರಿಯುತ್ತಿರುವ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ, ಓಕಳೀಪುರ ಅಂಡರ್ ಪಾಸ್ ಕೆರೆಯಂತಾಗಿದ್ದು, ವಾಹನ ಸವಾರರು ಚಾಲನೆ ಮಾಡಲು ಸಂಕಷ್ಟಪಡುವಂತಾಯಿತು. ಅಂಡರ್​ ಪಾಸ್ ಅವ್ಯವಸ್ಥೆಯ ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಅಕ್ಟೋಬರ್ 15: ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಮಳೆ ಸುರಿದಿದೆ. ನಂತರ ಜಿಟಿಜಿಟಿ ಸುರಿಯುತ್ತಿರುವ ಮಳೆಯಿಂದಾಗಿ ಕೆಆರ್​ ಮಾರುಕಟ್ಟೆ ಸೇರಿದಂತೆ ಅನೇಕ ಕಡೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ. ನಗರದ ಓಕಳೀಪುರ ಅಂಡರ್ ಪಾಸ್​​ನಲ್ಲಿ ನೀರು ತುಂಬಿದ್ದು, ಕೆರೆಯಂತಾಗಿದೆ. ಅಂಡರ್ ಪಾಸ್ ಪೂರ್ತಿ ಮಳೆ ನೀರು ತುಂಬಿದ್ದು, ವಾಹನ ಸವಾರರು ಚಾಲನೆಗೆ ಹರಸಾಹಸಪಡುವಂತಾಗಿದೆ.

ಅಂಡರ್ ಪಾಸ್​​​ನಲ್ಲಿ ನೀರು ನಿಂತಿರುವ ಕಾರಣ ವಾಹನಗಳು ಟ್ರಾಫಿಕ್ ಜಾಮ್​ನಲ್ಲಿ ಸಿಲುಕಿ ಪರದಾಟಪಡುವಂತಾಯಿತು. ಕಿಲೋಮೀಟರ್​​ಗಟ್ಟಲೇ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us on