AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?

ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ, ಕಾಮಗಾರಿ ಸ್ಥಗಿತಗೊಳಿಸಲು ಕಾರಣವೇನು?

ಅಕ್ಷಯ್​ ಪಲ್ಲಮಜಲು​​
|

Updated on:Mar 25, 2026 | 2:44 PM

Share

ಇಸ್ರೇಲ್-ಇರಾನ್ ಯುದ್ಧದಿಂದ ಬಿಟುಮೆನ್ ಪೂರೈಕೆ ವ್ಯತ್ಯಯಗೊಂಡು ಬೆಂಗಳೂರು ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿವೆ. ಕೊಲ್ಲಿ ರಾಷ್ಟ್ರಗಳಿಂದ ಬರುವ ಬಿಟುಮೆನ್ ಕೊರತೆ ಉಂಟಾಗಿದೆ. ಒಂದು ಟನ್ ಬಿಟುಮೆನ್ ಬೆಲೆ ₹45,000ದಿಂದ ₹60,000ಕ್ಕೆ ಏರಿರುವುದರಿಂದ ಗುತ್ತಿಗೆದಾರರಿಗೆ ಕಾಮಗಾರಿ ಮುಂದುವರಿಸಲು ಕಷ್ಟವಾಗಿದೆ. ಪರಿಣಾಮವಾಗಿ, ನಗರದ ಹಲವು ರಸ್ತೆ ಡಾಂಬರೀಕರಣ ಯೋಜನೆಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ.

ಬೆಂಗಳೂರು, ಮಾ.25: ಇಸ್ರೇಲ್-ಇರಾನ್ ನಡುವಿನ ಯುದ್ಧದ ಕಾರ್ಮೋಡಗಳು ಈಗ ಬೆಂಗಳೂರಿನ ರಸ್ತೆಗಳ ಮೇಲೂ ಬಿದ್ದಿದೆ. ಯುದ್ಧದ ಹಿನ್ನೆಲೆಯಲ್ಲಿ ಬಿಟುಮೆನ್ (Bitumen) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ನಗರದ ಪ್ರಮುಖ ರಸ್ತೆಗಳ ಡಾಂಬರೀಕರಣ ಕಾಮಗಾರಿಗಳು ಅರ್ಧಕ್ಕೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಡಾಂಬರು ಮಿಶ್ರಣಕ್ಕೆ ಅತ್ಯಗತ್ಯವಾಗಿರುವ ‘ಬಿಟುಮೆನ್’ ಕಚ್ಚಾ ತೈಲದ ಉಪ ಉತ್ಪನ್ನವಾಗಿದೆ. ಭಾರತಕ್ಕೆ ಇದರ ಬಹುಪಾಲು ಪೂರೈಕೆ ಕೊಲ್ಲಿ ರಾಷ್ಟ್ರಗಳಿಂದ ಆಗುತ್ತದೆ. ಯುದ್ಧದಿಂದಾಗಿ ಹಡಗುಗಳ ಸಂಚಾರ ಮತ್ತು ಪೂರೈಕೆಗೆ ಪೆಟ್ಟು ಬಿದ್ದಿದೆ. ಬೆಂಗಳೂರಿನ ಗುತ್ತಿಗೆದಾರರು ಮಂಗಳೂರು ರಿಫೈನರೀಸ್ (MRPL) ಮತ್ತು ಮದ್ರಾಸ್ ರಿಫೈನರೀಸ್ ಮೂಲಕ ಬಿಟುಮೆನ್ ಪಡೆಯುತ್ತಿದ್ದರು. ಆದರೆ ಈಗ ಅಲ್ಲಿಯೂ ಪೂರೈಕೆ ಕಡಿಮೆಯಾಗಿದೆ. ಪೂರೈಕೆ ಕಡಿಮೆ ಇರುವುದರಿಂದ ಬಿಟುಮೆನ್ ಬೆಲೆ ಗಗನಕ್ಕೇರಿದೆ. ಹಿಂದೆ ಒಂದು ಟನ್ ಬಿಟುಮೆನ್‌ಗೆ 45,000 ರೂ. ಇದ್ದ ದರ, ಈಗ 60,000 ರೂ.ಗೆ ಏರಿಕೆಯಾಗಿದೆ. ದರ ಏರಿಕೆಯಿಂದಾಗಿ ಗುತ್ತಿಗೆದಾರರ ವೆಚ್ಚ ವಿಪರೀತ ಹೆಚ್ಚಾಗಿದ್ದು, ಹಳೆಯ ದರದಲ್ಲಿ ಕಾಮಗಾರಿ ಮುಂದುವರಿಸುವುದು ಅಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅನೇಕ ಕಾಮಗಾರಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ವರದಿ: ಅರುಣ್​ ಕುಮಾರ್​​​​ ಟಿವಿ9 ಮೆಟ್ರೋ 

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Mar 25, 2026 02:43 PM
Follow Us