ಬೆಂಗಳೂರಲ್ಲಿ ದರೋಡೆ ಕೇಸ್: ಆರೋಪಿಗಳಿಗೆ ಪೊಲೀಸರ ಶಾಕ್, ಆಂಧ್ರದಲ್ಲಿ ಬಹುಪಾಲು ಹಣ ಸೀಜ್
ಬೆಂಗಳೂರಿನಲ್ಲಿ ನಡೆದ 7.11 ಕೋಟಿ ರಾಬರಿ ಪ್ರಕರಣದಲ್ಲಿ, ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದಾರೆ. ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ಮತ್ತು ಮಾಜಿ ಸಿಎಂಎಸ್ ಉದ್ಯೋಗಿ ಜೇವಿಯರ್ ಈ ದರೋಡೆಯ ಪ್ರಮುಖ ಸೂತ್ರಧಾರಿಗಳಾಗಿದ್ದು, ಇಬ್ಬರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಹಣ ಮತ್ತು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಬೆಂಗಳೂರು, ನವೆಂಬರ್ 21: ನಗರದಲ್ಲಿ ನಡೆದಿದ್ದ 7.11 ಕೋಟಿ ರಾಬರಿ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಕೃತ್ಯಕ್ಕೆ ಬಳಸಲಾಗಿದ್ದ ಇನ್ನೋವಾ ಕಾರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೆ, ಕೇಸ್ನ ಪ್ರಮುಖ ಆರೋಪಿಗಳಾದ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಅಣ್ಣಪ್ಪ ಮತ್ತು ಸಿಎಂಎಸ್ ಕಂಪನಿಯ ಮಾಜಿ ಉದ್ಯೋಗಿ ಜೇವಿಯರ್ನನ್ನು ಈಗಾಗಲೇ ಬಂಧಿಸಿದ್ದಾರೆ. ಉಳಿದ ಹಣ ಮತ್ತು ಆರೋಪಿಗಳ ಪತ್ತೆಗೆ ಪೊಲೀಸರ ಶೋಧ ಕಾರ್ಯ ತೀವ್ರಗೊಂಡಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್

