ಸಂಸದ ಡಾ ಸಿಎನ್ ಮಂಜುನಾಥ ಈಗ ಪಳಗಿದ ರಾಜಕಾರಣಿಯಂತೆ ಮಾತಾಡುತ್ತಿದ್ದಾರೆ!

ಅರುಣ್​ ಕುಮಾರ್​ ಬೆಳ್ಳಿ

Updated on: Oct 08, 2024 | 6:03 PM

ಮೊನ್ನಿನವರೆಗೆ ನಾಡಿನ ಪ್ರಖ್ಯಾತ ಹೃದ್ರೋಗ ತಜ್ಞರೆನಿಸಿಕೊಂಡಿದ್ದ ಡಾ ಮಂಜುನಾಥ ಅವರು ಈಗ ಒಬ್ಬ ನುರಿತ ರಾಜಕಾರಣಿಯ ಹಾಗೆ ಮಾತಾಡುತ್ತಿದ್ದಾರೆ. ಇವತ್ತು ಅವರು ರಾಮನಗರದಲ್ಲಿ ಮಾತಾಡಿದ್ದು ಒಬ್ಬ ಸೀಸನ್ಡ್ ಪೊಲಿಟಿಶಿಯನ್ ನನ್ನು ಮೀರಿಸುವಂತಿತ್ತು.

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ ಸಿಎನ್ ಮಂಜುನಾಥ ಅವರು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯ ಸಿಪಿ ಯೋಗೇಶ್ವರ್ ಆಥವಾ ಜೆಡಿಎಸ್ ಪಕ್ಷದ ನಿಖಿಲ್ ಕುಮಾರಸ್ವಾಮಿ-ಇಬ್ಬರಲ್ಲಿ ಯಾರು ಕಾಂಗ್ರೆಸ್ ವಿರುದ್ಧ ಸ್ಪರ್ಧಿಸಲಿದ್ದಾರೆ ಎಂದು ಕೇಳಿದಾಗ, ಅದನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ, ತಾನು ಸಮನ್ವಯ ಮತ್ತು ಸಂಸದೀಯ ಸಮಿತಿಯ ಭಾಗವಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಹೃದಯವಂತ ಸಂಸದ! ಆಂಜಿಯೋಪ್ಲ್ಯಾಸ್ಟಿ ಅಳವಡಿಸಿ ರೋಗಿಗೆ ಮರುಜೀವ ನೀಡಿದ ಡಾ. ಸಿಎನ್ ಮಂಜುನಾಥ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.