AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ

ಉಪನ್ಯಾಸಕ ಕನ್ನಡದಲ್ಲಿ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದ RV ಕಾಲೇಜು ಮಂಡಳಿ

TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jun 14, 2025 | 7:54 PM

Share

ಕನ್ನಡದಲ್ಲಿ ಮಾತನಾಡಿದ್ದಕ್ಕೆ ಉಪನ್ಯಾಸಕ ಕೆಲಸ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆ RV ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕನ್ನಡದಲ್ಲಿ ಪ್ರಶ್ನೆ ಕೇಳಿದ್ದ ವಿದ್ಯಾರ್ಥಿಗೆ ಉಪನ್ಯಾಸಕ ಕನ್ನಡದಲ್ಲೇ ಉತ್ತರಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮತ್ತೋರ್ವ ವಿದ್ಯಾರ್ಥಿಯೋರ್ವ, ಕನ್ನಡದಲ್ಲಿ ಉತ್ತರ ನೀಡಿದ್ದಕ್ಕೆ ಉಪನ್ಯಾಸಕನ ವಿರುದ್ಧ ದೂರು ಕಾಲೇಜಿನ ಆಡಳಿ ಮಂಡಳಿಗೆ ದೂರು ನೀಡಿದ್ದು,. ಈ ದೂರಿನ ಮೇರೆಗೆ RV ಕಾಲೇಜಿ ಆಡಳಿ ಮಂಡಳಿ, ಉಪನ್ಯಾಸಕನಿಗೆ ರಾಜೀನಾಮೆ ನಿಡುವಂತೆ ಒತ್ತಾಯಿಸಿದೆ.

ಬೆಂಗಳೂರು, (ಜೂನ್ 14): ಕನ್ನಡದಲ್ಲಿ ಮಾತನಾಡಿದ್ದಕ್ಕೆ ಉಪನ್ಯಾಸಕ ಕೆಲಸ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಕೋಣನಕುಂಟೆ RV ಪಿಯು ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕನ್ನಡದಲ್ಲಿ ಪ್ರಶ್ನೆ ಕೇಳಿದ್ದ ವಿದ್ಯಾರ್ಥಿಗೆ ಉಪನ್ಯಾಸಕ ಕನ್ನಡದಲ್ಲೇ ಉತ್ತರಿಸಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಮತ್ತೋರ್ವ ವಿದ್ಯಾರ್ಥಿ, ಕನ್ನಡದಲ್ಲಿ ಉತ್ತರ ನೀಡಿದ್ದಕ್ಕೆ ಉಪನ್ಯಾಸಕನ ವಿರುದ್ಧ ದೂರು ಕಾಲೇಜಿನ ಆಡಳಿ ಮಂಡಳಿಗೆ ದೂರು ನೀಡಿದ್ದು,. ಈ ದೂರಿನ ಮೇರೆಗೆ RV ಕಾಲೇಜಿ ಆಡಳಿ ಮಂಡಳಿ, ಉಪನ್ಯಾಸಕನಿಗೆ ರಾಜೀನಾಮೆ ನಿಡುವಂತೆ ಒತ್ತಾಯಿಸಿದೆ. ಇದಕ್ಕೆ ಒಪ್ಪದಿದ್ದಕ್ಕೆ ಬೆದರಿಕೆ ಹಾಕಲಾಗಿದೆ. ಉಪನ್ಯಾಸಕನ ಪುತ್ರಿ RV ಕಾಲೇಜಿನ ಬೇರೆ ಬ್ರ್ಯಾಂಚ್​​ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಮಗಳ ಟಿಸಿ ಹಾಗೂ ಇತರೆ ದಾಖಲೆ ಕೊಡಲ್ಲ ಎಂದು ಬೆದರಿಸಿದ್ದಾರೆ. ಮಗಳ ಭವಿಷ್ಯ, ಒತ್ತಡಕ್ಕೆ ಮಣಿದು ಕೊನೆಗೆ ಉಪನ್ಯಾಸಕ ರಾಜೀನಾಮೆ ನೀಡಿದ್ದು, ಈ ಬಗ್ಗೆ ತಮಗಾದ ಅನ್ಯಾಯದ ಬಗ್ಗೆ ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದಾರೆ.

ಕನ್ನಡ ಮಾತಾಡಿದ್ದಕ್ಕೆ ಹೀಗೆಲ್ಲ ಆಯ್ತು ಎಂದು ಉಪನ್ಯಾಸಕ ಅಳಲು ತೋಡಿಕೊಂಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಕನ್ನಡ ಸಂಘಟನೆಗಳು ಆಕ್ರೋಶಗೊಂಡಿವೆ. ಈ ಸಂಬಂಧ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಲಾಲ್ ಬಾಗ್ ಬಳಿ ಇರುವ ಆರ್​ ವಿ ಟ್ರಸ್ಟ್​ ಗೆ ಭೇಟಿ ನೀಡಿ ವಿಚಾರಿಸಿದ್ದಾರೆ. ಇದರ ಬೆನ್ನಲ್ಲೇ ಆಡಳಿತ ಮಂಡಳಿ ಉಪನ್ಯಾಸಕನಿಗೆ ಮತ್ತೆ ಕೆಲಸ ನೀಡುವುದಾಗಿ ಭರವಸೆ ನೀಡಿದೆ.

Published on: Jun 14, 2025 07:30 PM