ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಯತ್ನ: ಬೆಂಗಳೂರಲ್ಲಿ ಭಾರಿ ಹೈಡ್ರಾಮಾ
ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನೂ ಪ್ರಮುಖ ಅಸ್ತ್ರ ಮಾಡಿಕೊಂಡು ದೇಶವ್ಯಾಪಿ ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು, ಬಿಜೆಪಿ ಕಚೇರಿ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಬೆಂಗಳೂರು, ಜುಲೈ 21: ನೀಟ್ ಹಗರಣ ಖಂಡಿಸಿ ಹೋರಾಟದ ವೇಳೆ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದಿದ್ದನ್ನು ಖಂಡಿಸಿ ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನವನ್ನೂ ನಡೆಸಿದ್ದಾರೆ. ರಸ್ತೆಗೆ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದು, ಈ ವೇಳೆ ಬಿಜೆಪಿ ವಿರುದ್ಧ ಘೋಷಣೆಗಳು ಮೊಳಗಿವೆ. ಈ ವೇಳೆ ಪ್ರತಿಭಟನಾಕಾರರನ್ನು ಸುತ್ತುವರೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us

