ತಾಯಿ ಇಲ್ಲದ 15 ವರ್ಷದ ಬಾಲಕಿಯ ಬರ್ಬರ ಹತ್ಯೆ: ದ್ವೇಷದ ಕಥೆ ಬಿಚ್ಚಿಟ್ಟ SP

Updated on: Nov 27, 2025 | 4:33 PM

ಬಹಿರ್ದೆಸೆಗೆ ಹೋಗಿದ್ದ 15 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಬೋಳಾರೆ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ಮನೆಯ ಸಮೀಪ ಬಹಿರ್ದೆಸೆಗೆ ಹೋಗಿದ್ದ 15 ವರ್ಷದ ಬಾಲಕಿ ಕವನಳನ್ನು ಕತ್ತು ಹಿಸಿಕಿ ಕೊಲೆ ಮಾಡಲಾಗಿದೆ. ಬಹಿರ್ದೆಸೆಗೆ ಹೋಗಿದ್ದ ಕವನ ಸಂಜೆಯಾದರೂ ಮನೆಗೆ ವಾಪಸ್ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಬೆಂಗಳೂರು, (ನವೆಂಬರ್ 27): ಬಹಿರ್ದೆಸೆಗೆ ಹೋಗಿದ್ದ 15 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಬೋಳಾರೆ ಗ್ರಾಮದ ಬಳಿ ನಡೆದಿದೆ. ನಿನ್ನೆ ಮಧ್ಯಾಹ್ನ ಮನೆಯ ಸಮೀಪ ಬಹಿರ್ದೆಸೆಗೆ ಹೋಗಿದ್ದ 15 ವರ್ಷದ ಬಾಲಕಿ ಕವನಳನ್ನು ಕತ್ತು ಹಿಸಿಕಿ ಕೊಲೆ ಮಾಡಲಾಗಿದೆ. ಬಹಿರ್ದೆಸೆಗೆ ಹೋಗಿದ್ದ ಕವನ ಸಂಜೆಯಾದರೂ ಮನೆಗೆ ವಾಪಸ್ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಕವನಳ ತಂದೆ ಬೇರೊಂದು ಮದುವೆಯಾಗಿ ಬೇರೆಡೆ ವಾಸವಿದ್ದರೆ, ತಾಯಿ ಇಲ್ಲದ ಹಿನ್ನೆಲೆಯನ್ನು ಕವನ ಸಾವಿತ್ರಮ್ಮ ಎಂಬುವವರ ಜೊತೆ ವಾಸವಾಗಿದ್ದಳು. ಆದ್ರೆ, ಇದೀಗ ದುರಂತ ಸಾವು ಕಂಡಿದ್ದಾಳೆ. ಈ ಬಗ್ಗೆ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಘಟನೆ ಸಂಬಂಧ ಎಸ್ಪಿ ಏನು ಹೇಳಿದ್ದಾರೆ ನೋಡಿ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More