Live: ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ

Updated on: Jun 06, 2025 | 11:23 AM

ಆರ್‌ಸಿಬಿ ಸಂಭ್ರಮಾಚರಣೆ ದುರಂತ ಅಧ್ಯಾಯಕ್ಕೆ ಮುನ್ನಡಿ ಬರೆದಿದ್ದು, 11 ಜನರ ಬಲಿ ಪಡೆದಿದೆ. ಇದು ರಾಷ್ಟ್ರ ವ್ಯಾಪ್ತಿಯಲ್ಲಿ ಸುದ್ದಿಯಾಗಿದೆ. ಜೊತೆಗೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ರಾಷ್ಟ್ರದೆಲ್ಲೆಡೆ ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಈ ಮಧ್ಯೆ ಇಂದು ಬಿಜೆಪಿ, ಜೆಡಿಎಸ್​ ಜಂಟಿ ಸುದ್ದಿಗೋಷ್ಠಿ ಮಾಡಿದೆ. ಲೈವ್​ ನೋಡಿ.

ಬೆಂಗಳೂರು, ಜೂನ್​ 06: ಆರ್‌ಸಿಬಿ (RCB) ತಂಡ ಐಪಿಎಲ್ ಟ್ರೋಫಿ ಗೆದ್ದು ಬೆಂಗಳೂರಿನಲ್ಲಿ ವಿಜಯೋತ್ಸವ ಆಚರಿಸುವ ವೇಳೆ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ಉಸಿರು ಚೆಲ್ಲಿದ್ದಾರೆ. ಇವರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ. ಇದರ ಬೆನ್ನಲ್ಲೇ ಗುರುವಾರ ಕೆಲ ಪೊಲೀಸ್​ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸರ್ಕಾರವೇ ಇದಕ್ಕೆ ನೇರಹೊಣೆ ಅಂತಾ ಬಿಜೆಪಿ ವಾಗ್ದಾಳಿ ಮಾಡಿದೆ. ಇದೀಗ ಮಾಜಿ ಸಿಎಂ ಹೆಚ್​​​ಡಿ ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ನಾಯಕರು ಜಂಟಿ ಸುದ್ದಿಗೋಷ್ಠಿ ಮಾಡಿದ್ದಾರೆ. ಅದರ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More