RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಕೊನೆಗೂ ಸತ್ಯಬಿಚ್ಚಿಟ್ಟ ಸಿಎಂ

Edited By:

Updated on: Jun 11, 2025 | 4:42 PM

ಜೂನ್ 4, 2025. ಕರ್ನಾಟಕದ ಪಾಲಿಗೆ ಕರಾಳ ದಿನ. ಆರ್​​ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ವಿಧಾನಸೌಧ ಮೆಟ್ಟಿಲುಗಳ ಮೇಲೆ ಸಹ ಆರ್ ಸಿಬಿ ಅಭಿಮಾನಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಚಿಕ್ಕಬಳ್ಳಾಪುರ, (ಜೂನ್ 11): ಜೂನ್ 4, 2025. ಕರ್ನಾಟಕದ ಪಾಲಿಗೆ ಕರಾಳ ದಿನ. ಆರ್​​ ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇನ್ನು ವಿಧಾನಸೌಧ ಮೆಟ್ಟಿಲುಗಳ ಮೇಲೆ ಸಹ ಆರ್ ಸಿಬಿ ಅಭಿಮಾನಿಗಳಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೆ.ಗೋವಿಂದರಾಜು ಮೂಲಕ ರಾಜ್ಯಪಾಲರನ್ನು ನಾನು ಕರೆದಿದ್ದೇನೆ. ಎಂಎಲ್​ಸಿ ಕೆ.ಗೋವಿಂದರಾಜು ಮೂಲಕ ಕರೆ ಮಾಡಿಸಿ ಕರೆಸಿದ್ದೆ. ನಾನು ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ನೀವೂ ಬನ್ನಿ ಎಂದು ಕರೆದೆ. ಬೆಳಗ್ಗೆ 11.19ಕ್ಕೆ KSCA ಕಾರ್ಯದರ್ಶಿ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ರು ಎಂದು ಸ್ಪಷ್ಟಪಡಿಸಿದ್ದಾರೆ.

Published on: Jun 11, 2025 04:40 PM
Follow Us
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More