ಪೋಸ್ಟ್​ಮಾರ್ಟಂ ಬೇಡ, ಮಗನ ಮೃತದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು

Updated on: Jun 05, 2025 | 2:07 PM

ಕಾಲ್ತುಳಿತದಲ್ಲಿ ಮೃತಪಟ್ಟವರೆಲ್ಲ ನಮ್ಮ ಕುಟುಂಬದವರೇ. ಅವರ ಮನೆಯವರ ಜತೆಗೆ ನಾವಿದ್ದೇವೆ. ನಾನಾಗಲೀ, ಸಿಎಂ ಆಗಲಿ, ಗೃಹ ಸಚಿವರಾಗಲಿ ಅಷ್ಟೊಂದು ಜನ ಸೇರಬಹುದೆಂದು ನಿರೀಕ್ಷಿಸಿಯೇ ಇರಲಿಲ್ಲ. ಇದು ಆಘಾತಕಾರಿ ಘಟನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭಾವುಕರಾಗಿ ನುಡಿದರು. ಅವರ ಮಾತುಗಳ ವಿಡಿಯೋ ಇಲ್ಲಿದೆ.

ಬೆಂಗಳೂರು, ಜೂನ್ 5: ಆರ್​ಸಿಬಿ ಐಪಿಎಲ್ ವಿಜಯೋತ್ಸವದ ಸಂದರ್ಭ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟಿರುವುದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ತೀವ್ರ ಬೇಸರ ವ್ಯಕ್ತಪಡಿಸಿದರು. ಮಾಧ್ಯ ಪ್ರತಿನಿಧಿಗಳ ಬಳಿ ಭಾವುಕರಾಗಿ ಮಾತನಾಡಿದ ಅವರು, ಆ ಒಬ್ಬರು ತಾಯಿ, ‘‘ಪೋಸ್ಟ್​ಮಾರ್ಟಂ ಬೇಡ, ಮಗನ ಮೃತದೇಹ ಕೊಡಿ’’ ಎಂದು ಅತ್ತರು. ಇದನ್ನೆಲ್ಲ ನೋಡಿದರೆ ಕಣ್ಣೀರು ಬರದಿರುತ್ತದೆಯೇ ಎಂದರು. ಅಷ್ಟೇ ಅಲ್ಲದೆ, ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More