ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು: ಪ್ರಶಾಂತ್ ಮನ ಮಿಡಿಯುವ ಮಾತು

Updated on: Jun 08, 2025 | 1:15 PM

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಆರ್​ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆ ಬಗ್ಗೆ ಗಾಯಾಳು ಪ್ರಶಾಂತ್ ಎಂಬುವವರು ದುರಂತದ ಭೀಕರತೆ ಬಿಚ್ಚಿಟ್ಟಿದ್ದಾರೆ. ಗೇಟ್ ನಂಬರ್ 7 ಬಳಿ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರಿಂದ ಉಂಟಾದ ಈ ದುರಂತದಲ್ಲಿ ಅವರು ತೀವ್ರ ಸಂಕಷ್ಟ ಅನುಭವಿಸಿರುವುದಾಗಿ ಹೇಳಿದ್ದಾರೆ.

ಬೆಂಗಳೂರು, ಜೂನ್​ 08: ಕಾಲ್ತುಳಿತದಿಂದ ಆರ್​ಸಿಬಿಯ (RCB) 11 ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದ ಭೀಕರತೆಯನ್ನು ಗಾಯಾಳು ಪ್ರಶಾಂಶ್​ ಎಂಬುವವರು ಬಿಚ್ಚಿಟ್ಟಿದ್ದಾರೆ. ಸ್ಟೇಡಿಯಂನ ಗೇಟ್ ನಂ.7ರ ಬಳಿ 1 ಲಕ್ಷ ಜನರು ಸೇರಿದ್ದರು. ಕೈಮುಗಿದು ಕೇಳಿಕೊಂಡರು ಸಹ ಸೆಕ್ಯೂರಿಟಿ ಗೇಟ್ ತೆಗೆಯಲಿಲ್ಲ. ನಾನು ರಸ್ತೆಯಲ್ಲೇ ಒಂದು ಗಂಟೆ ಬಿದ್ದು ಒದ್ದಾಡಿದ್ದೆ. ಇದು ಸರ್ಕಾರ ಮಾಡಿದ ಎಡವಟ್ಟು ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More