ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಆಯೋಜನೆ ಮಾಡಿದ್ದು KSCA. ತಪ್ಪು ಅವರದ್ದೇ ಅಂತಾ ಸರ್ಕಾರ ಹೇಳ್ತಿದೆ.. ಸರ್ಕಾರವೇ ಸನ್ಮಾನದ ಪ್ರಸ್ತಾಪ ಮಾಡಿದ್ದು, ಅವರಿಂದಲೇ ಲೋಪವಾಗಿದೆ ಅಂತಾ KSCA ಹೇಳ್ತಿದೆ.. ಈ ಆರೋಪ ಪ್ರತ್ಯಾರೋಪಗಳ ಮಧ್ಯೆ ಜೀವ ಕಳೆದುಕೊಂಡ 11 ಜನರ ಕುಟುಂಬಗಳು ಕಣ್ಣೀರಿಡುತ್ತಿವೆ. ಇನ್ನು ಈ ಘಟನೆ ಬಗ್ಗೆ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಈ ಸಂಬಂಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.
ಬೆಂಗಳೂರು, (ಜೂನ್ 08): ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿದಲ್ಲಿ 11 RCB ಅಭಿಮಾನಿಗಳು ದುರಂತ ಅಂತ್ಯ ಕಂಡಿದ್ದಾರೆ.. ಆದ್ರೆ, ಈ ದುರಂತಕ್ಕೆ ಹೊಣೆ ಹೊರಲು ಯಾರೂ ಸಿದ್ಧರಿಲ್ಲ. ಕಾಲ್ತುಳಿತ ಹೇಗಾಯ್ತು ಅಂತಾ ಅಂತೆ ಕಂತೆಗಳು ಹುಟ್ಟಿಕೊಂಡಿದ್ದರೂ ಅದರ ಅಸಲಿ ಕಾರಣ ಪತ್ತೆಗೆ ತನಿಖಾ ತಂಡಗಳು ಅಖಾಡಕ್ಕೆ ಇಳಿದಿವೆ. ಆಯೋಜನೆ ಮಾಡಿದ್ದು KSCA. ತಪ್ಪು ಅವರದ್ದೇ ಅಂತಾ ಸರ್ಕಾರ ಹೇಳ್ತಿದೆ.. ಸರ್ಕಾರವೇ ಸನ್ಮಾನದ ಪ್ರಸ್ತಾಪ ಮಾಡಿದ್ದು, ಅವರಿಂದಲೇ ಲೋಪವಾಗಿದೆ ಅಂತಾ KSCA ಹೇಳ್ತಿದೆ.. ಈ ಆರೋಪ ಪ್ರತ್ಯಾರೋಪಗಳ ಮಧ್ಯೆ ಜೀವ ಕಳೆದುಕೊಂಡ 11 ಜನರ ಕುಟುಂಬಗಳು ಕಣ್ಣೀರಿಡುತ್ತಿವೆ. ಇನ್ನು ಈ ಘಟನೆ ಬಗ್ಗೆ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು, ಈ ಸಂಬಂಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಇದರ ನೇರಪ್ರಸಾರ ಇಲ್ಲಿದೆ ನೋಡಿ.
Follow Us
Latest Videos

