Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ

Updated on: Jun 05, 2025 | 11:28 AM

18 ವರ್ಷದ ಸಂಭ್ರಮ 18 ಗಂಟೆಯೂ ಇರ್ಲಿಲ್ಲ.. ಎರಡು ದಶಕದ ಬಳಿಕದ ಸಂಭ್ರಮಾಚರಣೆ ಎರಡು ದಿನವೂ ಇರ್ಲಿಲ್ಲ.. ಐಪಿಎಲ್‌ ಸಾಮ್ರಾಜ್ಯ ಗೆದ್ದು ಬಂದ ಕಲಿಗಳನ್ನ ವಿಧಾನಸೌಧದ ಮೆಟ್ಟಿಲು ಮೇಲೆ ನಿಲ್ಲಿಸಿ ಹೂವಿನ ಹಾರಹಾಕ್ತಿದ್ರೆ, ಇಲ್ಲಿಂದ ಕೂಗಳತೆ ದೂರದಲ್ಲೇ ಇರೋ ಚಿನ್ನಸ್ವಾಮಿ ಅಂಗಳದ ಮುಂದೆ ಅಭಿಮಾನಿಗಳ ಮಾರಣಹೋಮ ಆಗಿತ್ತು.

ಬೆಂಗಳೂರು, ಜೂನ್​ 05: ಬರೋಬ್ಬರಿ 18 ವರ್ಷಗಳ ಕಾಯುವಿಕೆ ಅಂತ್ಯವಾಗಿತ್ತು. ಆರ್​​ಸಿಬಿ ತಂಡ ಐಪಿಎಲ್‌ ಕಪ್‌ ಎತ್ತಿ ಹಿಡಿಯುತ್ತಿದ್ದಂತೆ ಇಡೀ ಕರುನಾಡು ಸಂಭ್ರಮಿಸಿತ್ತು. ಆದರೆ ಅದೇ ಸಂಭ್ರಮ ಒಂದೇ ದಿನದಲ್ಲಿ ಅಂತ್ಯವಾಗಿದೆ. ಸಂಭ್ರಮಾಚರಣೆ ವೇಳೆ ಉಂಟಾಗಿರುವ ಕಾಲ್ತುಳಿತ ದುರಂತದಲ್ಲಿ 11 ಅಭಿಮಾನಿಗಳು ಬಲಿ ಆಗಿದ್ದಾರೆ. ಸದ್ಯ ಈ ಘಟನೆ ರಾಷ್ಟ್ರಮಟ್ಟದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ. ಘಟನೆಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣವೆಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕೂಡ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದೆ. ಈ ವಿಚಾರವಾಗಿ ಇದೀಗ ವಿಪಕ್ಷ ನಾಯಕ ಆರ್​. ಅಶೋಕ್ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜಂಟಿ ಸುದ್ದಿಗೋಷ್ಠಿ ಮಾಡಿದ್ದಾರೆ. ಅದರ ನೇರ ಪ್ರಸಾರ ಇಲ್ಲಿದೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More