ದೇವಸ್ಥಾನದಲ್ಲಿ ಭಜನೆ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರದೊಂದಿಗೆ ಕಳ್ಳ ಪರಾರಿ

|

Updated on: Oct 15, 2024 | 7:24 PM

ಬೆಂಗಳೂರಿನಲ್ಲಿ ಕೆಲವು ಮಹಿಳೆಯರು ವಿನಾಯಕ ದೇವಸ್ಥಾನದಲ್ಲಿ ಕುಳಿತು ಭಜನೆ ಮಾಡುತ್ತಿದ್ದರು. ಈ ವೇಳೆ ಕಿಟಕಿಯ ಬಳಿ ಕುಳಿತು ಭಜನೆ ಮಾಡುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈಹಾಕಿದ ಕಳ್ಳನೊಬ್ಬ ಆಕೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಈ ದೃಶ್ಯ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರು: ಬೆಂಗಳೂರಿನ ನಂದಿನಿ ಲೇಔಟ್​ನ ಶಂಕರಪುರದ ವಿನಾಯಕ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ದೇವರ ಭಜನೆ ಮಾಡುತ್ತಿರುವಾಗ ದೇವಾಲಯದ ಹೊರಗಿನಿಂದ ಕಿಟಕಿಯಿಂದಲೇ ಆ ಮಹಿಳೆಯ ಕುತ್ತಿಗೆಗೆ ಕೈಹಾಕಿದ ಕಳ್ಳ ಆಕೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಆಗ ಆ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದರಿಂದ ಭಜನೆ ಮಾಡುತ್ತಿದ್ದ ಮಹಿಳೆಯರೆಲ್ಲ ಹೊರಬಂದು ಕಳ್ಳನನ್ನು ಹಿಡಿಯಲು ಪ್ರಯತ್ನಿಸಿದರೂ ಆತ ಸಿಕ್ಕಿಲ್ಲ. 30 ಗ್ರಾಂ ತೂಕದ ಚಿನ್ನದ ತಾಳಿ ಸರ ಕಿತ್ತುಕೊಂಡು ಕಳ್ಳ ಪರಾರಿಯಾಗಿದ್ದಾನೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಫ್​ಐಆರ್​ ದಾಖಲು ಮಾಡಿದ ನಂದಿನಿ ಲೇಔಟ್ ಪೊಲೀಸ್​​ ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 pm, Tue, 15 October 24

Follow us on