ಬೆಂಗಳೂರು: ಬೆಂಗಳೂರಿನ ನಂದಿನಿ ಲೇಔಟ್ನ ಶಂಕರಪುರದ ವಿನಾಯಕ ದೇವಸ್ಥಾನದಲ್ಲಿ ಮಹಿಳೆಯೊಬ್ಬರು ದೇವರ ಭಜನೆ ಮಾಡುತ್ತಿರುವಾಗ ದೇವಾಲಯದ ಹೊರಗಿನಿಂದ ಕಿಟಕಿಯಿಂದಲೇ ಆ ಮಹಿಳೆಯ ಕುತ್ತಿಗೆಗೆ ಕೈಹಾಕಿದ ಕಳ್ಳ ಆಕೆಯ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ. ಆಗ ಆ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದರಿಂದ ಭಜನೆ ಮಾಡುತ್ತಿದ್ದ ಮಹಿಳೆಯರೆಲ್ಲ ಹೊರಬಂದು ಕಳ್ಳನನ್ನು ಹಿಡಿಯಲು ಪ್ರಯತ್ನಿಸಿದರೂ ಆತ ಸಿಕ್ಕಿಲ್ಲ. 30 ಗ್ರಾಂ ತೂಕದ ಚಿನ್ನದ ತಾಳಿ ಸರ ಕಿತ್ತುಕೊಂಡು ಕಳ್ಳ ಪರಾರಿಯಾಗಿದ್ದಾನೆ. ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲು ಮಾಡಿದ ನಂದಿನಿ ಲೇಔಟ್ ಪೊಲೀಸ್ ತನಿಖೆ ಆರಂಭಿಸಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:19 pm, Tue, 15 October 24