ರಾಜ್ಯಪಾಲರಿಗೂ ತಟ್ಟಿದ ಟ್ರಾಫಿಕ್ ಬಿಸಿ; ಸಂಚಾರ ಸುಗಮಗೊಳಿಸಲು ಖುದ್ದು ಫೀಲ್ಡಿಗಿಳಿದ ಎಸ್ಪಿ

Edited By:

Updated on: Feb 29, 2024 | 9:44 PM

ದಿನನಿತ್ಯ ಮಹಾನಗರಕ್ಕೆ ಲಕ್ಷಾಂತರ ಮಂದಿ ಲಗ್ಗೆ ಇಡುತ್ತಾರೆ. ಈ ಹಿನ್ನಲೆ ಸಿಲಿಕಾನ್​ ಸಿಟಿ ಮಂದಿಗೆ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು(ಫೆ.29) ರಾಜ್ಯಪಾಲರಿಗೂ ಟ್ರಾಫಿಕ್ ಬಿಸಿ ತಟ್ಟಿದ್ದು, ರಾಯಚೂರಿನಿಂದ ಬೆಂಗಳೂರಿಗೆ ರಸ್ತೆ ಮೂಲಕ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 4, ನೆಲಮಂಗಲ ನವಯುಗ ಟೋಲ್ ಬಳಿ ಫುಲ್​ ಟ್ರಾಫಿಕ್ ಉಂಟಾಗಿದೆ.

ಬೆಂಗಳೂರು ಗ್ರಾಮಾಂತರ, ಫೆ.29: ರಾಜ್ಯ ರಾಜಧಾನಿ ಬೆಂಗಳೂರು, ಟ್ರಾಫಿಕ್​ ಸಮಸ್ಯೆಗೂ ಹೆಸರುವಾಸಿಯಾಗಿದೆ. ದಿನನಿತ್ಯ ಮಹಾನಗರಕ್ಕೆ ಲಕ್ಷಾಂತರ ಮಂದಿ ಲಗ್ಗೆ ಇಡುತ್ತಾರೆ. ಈ ಹಿನ್ನಲೆ ಸಿಲಿಕಾನ್​ ಸಿಟಿ ಮಂದಿಗೆ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯವಾಗಿದೆ. ಅದರಂತೆ ಇಂದು(ಫೆ.29) ರಾಜ್ಯಪಾಲರಿಗೂ ಟ್ರಾಫಿಕ್ ಬಿಸಿ ತಟ್ಟಿದ್ದು, ರಾಷ್ಟ್ರೀಯ ಹೆದ್ದಾರಿ4 ನೆಲಮಂಗಲ ನವಯುಗ ಟೋಲ್ ಬಳಿ ಫುಲ್​ ಟ್ರಾಫಿಕ್ ಉಂಟಾಗಿದೆ. ಇದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರೇ ಖುದ್ದು ಫೀಲ್ಡಿಗಿಳಿದು ಸಂಚಾರವನ್ನು ಸುಗಮಗೊಳಿಸಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌( Thawar Chand Gehlot) ಅವರು ರಾಯಚೂರಿನಿಂದ ಬೆಂಗಳೂರಿಗೆ ರಸ್ತೆ ಮೂಲಕ ತೆರಳುವಾಗ ಈ ಘಟನೆ ನಡೆದಿದ್ದು, ರಾಜ್ಯಪಾಲರ ಕಾರಿನ ಜೋತೆ
ಹತ್ತಾರು ಪೊಲೀಸ್ ವಾಹನಗಳು ಹೆದ್ದಾರಿಯಲ್ಲಿ ಹರಸಾಹಸ ಪಟ್ಟು ಸಾಗಿದ್ದಾವೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More