AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಳೆಗೆ ಬಲಿ: 'ಇದು ಸರ್ಕಾರದ ವೈಫಲ್ಯ' ಎಂದು ಗುಡುಗಿದ ಆರ್. ಅಶೋಕ್

ಬೆಂಗಳೂರು ಮಳೆಗೆ ಬಲಿ: ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್. ಅಶೋಕ್

ಅಕ್ಷಯ್​ ಪಲ್ಲಮಜಲು​​
|

Updated on: Apr 29, 2026 | 10:40 PM

Share

ಬೆಂಗಳೂರಿನಲ್ಲಿ ಸುರಿದ ಮೊದಲ ಮಳೆಯಿಂದ ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಗೋಡೆ ಕುಸಿದು ಮೂವರು ಮಕ್ಕಳು ಸೇರಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಇದು ಸರ್ಕಾರದ ನಿರ್ಲಕ್ಷ್ಯದ ಫಲ ಎಂದು ಮಾಜಿ ಸಚಿವರಾದ ಆರ್. ಅಶೋಕ್ ಅವರು ಆರೋಪಿಸಿದ್ದಾರೆ. ಮೃತರ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

ಬೆಂಗಳೂರು, ಏ,29: ಇಂದು ರಾಜಧಾನಿಯಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರ ಪೈಕಿ ಮೂವರು ಮಕ್ಕಳು ಸಹ ಸೇರಿದ್ದಾರೆ. ಈ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವರಾದ ಆರ್. ಅಶೋಕ್ ಅವರು ತೀವ್ರವಾಗಿ ಆರೋಪಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಸರ್ಕಾರ ಬಿರುಕು ಬಿಟ್ಟಿರುವ ಗೋಡೆಗಳು, ಹಳೆಯ ಮನೆಗಳು ಮತ್ತು ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಮೊದಲ ಮಳೆಯ ಸಣ್ಣ ಆಘಾತಕ್ಕೆ ಇಂತಹ ದೊಡ್ಡ ಅನಾಹುತ ಸಂಭವಿಸಿದೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ದೆಹಲಿ ಪ್ರವಾಸದಲ್ಲಿರುವಾಗ ಈ ದುರ್ಘಟನೆ ನಡೆದಿರುವುದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಮೃತ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆರ್. ಅಶೋಕ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us