Video: ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ ಪತಿ, ಪ್ರತ್ಯಕ್ಷದರ್ಶಿ ಹೇಳಿದ್ದೇನು?

Updated on: Dec 24, 2025 | 10:21 AM

ಬೆಂಗಳೂರಿನ ಬಸವೇಶ್ವರ ನಗರ ಮುಖ್ಯರಸ್ತೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ವಿಚ್ಛೇದನ ನೋಟಿಸ್‌ ನೀಡಿದ್ದರಿಂದ ಕುಪಿತಗೊಂಡ ಬಾಲಮುರುಗನ್, ಭುವನೇಶ್ವರಿ ಅವರ ಮೇಲೆ ಐದು ಸುತ್ತು ಗುಂಡು ಹಾರಿಸಿದ್ದಾನೆ. ಘಟನೆ ಸಂಜೆ 6:45ರ ಸುಮಾರಿಗೆ ನಡೆದಿದ್ದು, ಪ್ರತ್ಯಕ್ಷದರ್ಶಿ ದೇವರಾಜ್ ಘಟನೆಯ ವಿವರ ನೀಡಿದ್ದಾರೆ.

ಬೆಂಗಳೂರು, ಡಿ.24: ಬೆಂಗಳೂರಿನ ಬಸವೇಶ್ವರ ನಗರ ಮುಖ್ಯರಸ್ತೆಯಲ್ಲಿ ನಿನ್ನೆ ಸಂಜೆ ನಡೆದ ಭೀಕರ ಘಟನೆಯಲ್ಲಿ ಪತಿ ತನ್ನ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾನೆ. ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಗೆ ಪತ್ನಿ ನೀಡಿದ್ದ ವಿಚ್ಛೇದನ ನೋಟಿಸ್‌ ಕಾರಣ ಎನ್ನಲಾಗಿದೆ. ಬಾಲಮುರುಗನ್ ಎಂಬಾತ ತನ್ನ ಪತ್ನಿ ಭುವನೇಶ್ವರಿ (39) ಅವರ ಮೇಲೆ ಐದು ಬಾರಿ ಗುಂಡು ಹಾರಿಸಿ ಕೊಲೆಗೈದಿದ್ದಾನೆ. ಪ್ರತ್ಯಕ್ಷದರ್ಶಿ ದೇವರಾಜ್ ಅವರ ಹೇಳಿರುವ ಪ್ರಕಾರ, ಸಂಜೆ 6:45 ರಿಂದ 7:00 ಗಂಟೆ ಸುಮಾರಿಗೆ ಡಬ್ ಡಬ್ ಎಂಬ ಶಬ್ದ ಕೇಳಿಸಿತು. ಸ್ಥಳಕ್ಕೆ ಬಂದು ನೋಡಿದಾಗ ಮಹಿಳೆಯೊಬ್ಬರು ಕೆಳಗೆ ಬಿದ್ದಿದ್ದರು. ಅವರ ದೇಹಕ್ಕೆ ನಾಲ್ಕು ಗುಂಡುಗಳು ತಗುಲಿದ್ದವು, ಅದರಲ್ಲಿ ಒಂದು ತಲೆಗೆ ಮತ್ತು ಎರಡು ಕೈಗಳಿಗೆ ತಗುಲಿದ್ದವು. ಗಾಯಗೊಂಡ ಭುವನೇಶ್ವರಿ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಘಟನೆ ಬಳಿಕ ಆರೋಪಿ ಬಾಲಮುರುಗನ್ ಸ್ಥಳದಿಂದ ಪರಾರಿಯಾಗಿದ್ದ, ನಂತರ ಮಾಗಡಿ ರಸ್ತೆ ಪೊಲೀಸರ ಎದುರು ಶರಣಾಗಿದ್ದಾನೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More