ಗೌರಿ-ಗಣೇಶ ಹಬ್ಬಕ್ಕೆ ಖರೀದಿ ಭರಾಟೆ ಜೋರು: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ; ಟ್ರಾಫಿಕ್​​ ಜಾಮ್​​

Edited By:

Updated on: Sep 13, 2026 | 7:10 AM

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಖರೀದಿಗೆ ಜನಸಂದಣಿ ಹೆಚ್ಚಾಗಿದೆ. ಬೆಳಿಗ್ಗೆ 3 ಗಂಟೆಯಿಂದಲೇ ವ್ಯಾಪಾರ ಭರಾಟೆ ಶುರುವಾಗಿದ್ದು, ಬೆಲೆಗಳು ದುಪ್ಪಟ್ಟಾಗಿದ್ದರೂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಜನರು ಉತ್ಸುಕರಾಗಿದ್ದಾರೆ. ಪೊಲೀಸರು ಜನಸಂದಣಿಯನ್ನು ನಿಯಂತ್ರಿಸುತ್ತಿದ್ದಾರೆ. ಈ ಬಾರಿ ಗೌರಿ ಮತ್ತು ಗಣೇಶ ಹಬ್ಬಗಳು ಒಂದೇ ದಿನ ಬಂದಿರುವುದು ಮತ್ತು ಭಾನುವಾರವೂ ಆಗಿರುವುದು ಜನಸಂದಣಿಗೆ ಮತ್ತಷ್ಟು ಕಾರಣವಾಗಿದೆ.

ಬೆಂಗಳೂರು, ಸೆಪ್ಟೆಂಬರ್​​ 13: ನಾಳೆ ಗೌರಿ-ಗಣೇಶ ಹಬ್ಬ ಹಿನ್ನೆಲೆ ಬೆಂಗಳೂರಿನ ಕೆ.ಆರ್​​. ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ಮಧ್ಯರಾತ್ರಿಯಿಂದಲೇ ಭರ್ಜರಿ ವ್ಯಾಪಾರ ನಡೆಯುತ್ತಿದ್ದು, ಹೂವು-ಹಣ್ಣುಗಳು ಸೇರಿದಂತೆ ಪೂಜಾ ಸಾಮಗ್ರಿಗಳ ಖರೀದಿಗೆ ಜನರು ಮುಗಿ ಬಿದ್ದಿದ್ದಾರೆ. ನಸುಕಿನ 3 ಗಂಟೆಯಿಂದಲೇ ಮಾರುಕಟ್ಟೆ ಚಟುವಟಿಕೆಗಳು ಆರಂಭಗೊಂಡಿದ್ದು, ಜನಸಾಗರವೇ ಹರಿದುಬಂದಿದೆ. ಈ ಬಾರಿ ಗೌರಿ ಮತ್ತು ಗಣೇಶ ಹಬ್ಬಗಳು ಒಂದೇ ದಿನ ಬಂದಿರುವುದು ಮತ್ತು ಭಾನುವಾರವೂ ಆಗಿರುವುದು ಜನಸಂದಣಿಗೆ ಮತ್ತಷ್ಟು ಕಾರಣವಾಗಿದೆ. ಪರಿಣಾಮ ಕೆ.ಆರ್​.ಮಾರ್ಕೆಟ್​​ ಸುತ್ತಮುತ್ತ ಫುಲ್​​​ ಟ್ರಾಫಿಕ್​​​ಜಾಮ್​​ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

Published on: Sep 13, 2026 07:06 AM
Loading...
Unable to load recommendations.
Follow Us