ವಿದ್ಯುತ್ ಕಳ್ಳತನದ ಆರೋಪ; ಹೆಚ್ ಡಿ ಕುಮಾರಸ್ವಾಮಿ ಮನೆಯಲ್ಲಿ ಮಹಜರ್ ನಡೆಸಿದ ಬೆಸ್ಕಾಂ ಅಧಿಕಾರಿಗಳು!

ಅರುಣ್​ ಕುಮಾರ್​ ಬೆಳ್ಳಿ

Updated on: Nov 14, 2023 | 4:41 PM

ವಿದ್ಯುತ್ ದೀಪಗಳ ಡೆಕೋರೋಟರ್ ನಿಂದ ಆದ ಅಚಾತುರ್ಯವೋ ಅಥವಾ ಯಾರಿಗೆ ಗೊತ್ತಾಗುತ್ತೆ ಎಂಬ ಉಡಾಫೆಯೋ ಅಥವಾ ಉದ್ದೇಶಪೂರ್ವಕವೋ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತಿಲ್ಲ. ಆದರೆ ವಿದ್ಯುತ್ ಕಳ್ಳತನದ ಆರೋಪದದಲ್ಲಿ ಬೆಸ್ಕಾಂ ಅಧಿಕಾರಿಗಳು ಕುಮಾರಸ್ವಾಮಿ ಮನೆಗೆ ಆಗಮಿಸಿ ಮಹಜರ್ ನಡೆಸಿದ್ದಂತೂ ಸತ್ಯ.

ಬೆಂಗಳೂರು: ಇದು ಇಷ್ಟೆಲ್ಲ ಅವಾಂತರಗಳಿಗೆ ಕಾರಣವಾದೀತು ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅಂದುಕೊಂಡಿರಲಾರರು. ವಿದ್ಯುತ್ ದೀಪಗಳ ಡೆಕೋರೋಟರ್ ನಿಂದ (decorator) ಆದ ಅಚಾತುರ್ಯವೋ ಅಥವಾ ಯಾರಿಗೆ ಗೊತ್ತಾಗುತ್ತೆ ಎಂಬ ಉಡಾಫೆಯೋ ಅಥವಾ ಉದ್ದೇಶಪೂರ್ವಕವೋ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತಿಲ್ಲ. ಆದರೆ ವಿದ್ಯುತ್ ಕಳ್ಳತನದ ಆರೋಪದದಲ್ಲಿ ಬೆಸ್ಕಾಂ ಅಧಿಕಾರಿಗಳು (BESCOM officials) ಕುಮಾರಸ್ವಾಮಿ ಮನೆಗೆ ಆಗಮಿಸಿ ಮಹಜರ್ ನಡೆಸಿದ್ದಂತೂ ಸತ್ಯ. ಅದನ್ನು ದೃಶ್ಯಗಳಲ್ಲಿ ನೋಡಬಹುದು. ಕುಮಾರಸ್ವಾಮಿ ಮನೆಯೊಳಗೆ ಪರಿಶೀಲನೆ ನಡೆಸಿ ಹೊರಬಂದ ಬಳಿಕ ಒಲ್ಲದ ಮನಸ್ಸಿನಿಂದ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತಾಡಿದ ಬೆಸ್ಕಾಂ ಕಾ​ರ್ಯ ನಿರ್ವಾಹಕ ಇಂಜಿನೀಯರ್ ಸುಧಾಕರ್ ರೆಡ್ಡಿ, ಇಲಾಖೆ ವತಿಯಿಂದ ಮಹಜರ್ ನಡೆಸಲಾಗಿದೆ, ಎಷ್ಟು ಯೂನಿಟ್ ವಿದ್ಯುತ್ ಕಳ್ಳತನವಾಗಿದೆ ಅನ್ನೋದನ್ನು ದಾಖಲಿಸಿಕೊಳ್ಳಲಾಗಿದೆ ಕಚೇರಿಯಲ್ಲಿ ಅದಕ್ಕೆ ದಂಡ ಎಷ್ಟಾಗಲಿದೆ ಅನ್ನೋದನ್ನು ಲೆಕ್ಕ ಹಾಕಲಾಗುತ್ತದೆ, ಮತ್ತು ದಂಡವನ್ನು ಪಾವತಿಸಲು ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.