ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

Updated on: Jul 26, 2024 | 11:07 PM

ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಪತ್ತೆಗೆ ಬೆಂಗಳೂರು ಪೊಲೀಸರು ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ನಿಯಮ ಉಲ್ಲಂಘಿಸುವ ಸವಾರರ ಪತ್ತೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಈ ಹೊಸ ತಂತ್ರಜ್ಞಾನದ ಬಗ್ಗೆ ಪರಮೇಶ್ವರ್​ ಮಾಹಿತಿ ಪಡೆದುಕೊಂಡಿದ್ದಾರೆ.

ಬೆಂಗಳೂರು, ಜುಲೈ 26: ನಗರದ ಸಂಚಾರ ಕೇಂದ್ರ ಕಚೇರಿಯಲ್ಲಿ ಇಂದು ಪೊಲೀಸ್ ಅಧಿಕಾರಿಗಳ ಜತೆ ಗೃಹಸಚಿವ ಡಾ.ಪರಮೇಶ್ವರ್ (Dr. G Parameshwara) ಸಭೆ ಮಾಡಿದ್ದು, ಸಂಚಾರ ದಟ್ಟಣೆ ಮತ್ತು ನಿರ್ವಹಣೆ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ, ಸಂಚಾರ ವಿಭಾಗ ಜಂಟಿ ಆಯುಕ್ತ ಅನುಚೇತ್ ಸೇರಿ ಹಲವರು ಭಾಗಿಯಾಗಿದ್ದರು. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಪತ್ತೆಗೆ ಬೆಂಗಳೂರು ಪೊಲೀಸರು ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದ್ದಾರೆ. ನಿಯಮ ಉಲ್ಲಂಘಿಸುವ ಸವಾರರ ಪತ್ತೆಗೆ ಸುಧಾರಿತ ತಂತ್ರಜ್ಞಾನ ಪ್ರೇರಿತ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಈ ಹೊಸ ತಂತ್ರಜ್ಞಾನದ ಬಗ್ಗೆ ಪರಮೇಶ್ವರ್​ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಡಾ.ಜಿ.ಪರಮೇಶ್ವರ್, ಟ್ರಾಫಿಕ್‌ಜಾಮ್‌ಗೆ ಬೆಂಗಳೂರು ನಗರ ಕುಖ್ಯಾತಿ ಪಡೆದುಕೊಂಡಿತ್ತು. ನಮ್ಮವರು ಸಾಕಷ್ಟು ಉತ್ತಮ ಪಡಿಸುವ ಕೆಲಸ ಮಾಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ವರದಿ: ಪ್ರದೀಪ್​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More