ಬಾಗಪ್ಪ ಹರಿಜನ್ ಹತ್ಯೆ ಆರೋಪಿಗಳನ್ನು 14-ದಿನ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಿದ ವಿಜಯಪುರದ ನ್ಯಾಯಾಲಯ

ಅರುಣ್​ ಕುಮಾರ್​ ಬೆಳ್ಳಿ

Updated on: Feb 18, 2025 | 3:15 PM

ಬಾಗಪ್ಪ ಹರಿಜನ್ ಮೇಲೆ 2018ರಲ್ಲೇ ಮಾರಣಾಂತಿಕ ಹಲ್ಲೆ ನಡೆದಿತ್ತು ಅದರೆ, ಸಾಕಷ್ಟು ದುಡ್ಡು ಹೊಂದಿದ್ದ ಅವನು ಹೈದರಾಬಾದ್​ನಲ್ಲಿ ಚಿಕಿತ್ಸೆ ಪಡೆದು ಗುಣಮುಖನಾಗಿದ್ದ. ಆಗ ಕಲಬುರಗಿ ಮತ್ತು ವಿಜಯಪುರದಲ್ಲಿ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಬಾಗಪ್ಪ ತನ್ನ ಚಿಕಿತ್ಸೆಗಾಗಿ ಸುಮಾರು ಒಂದು ಕೋಟಿ ರೂಪಾಯಿಗಳಷ್ಟು ಹಣ ಖರ್ಚು ಮಾಡಿದ್ದ.

ವಿಜಯಪುರ: ಬಾಗಪ್ಪ ಹರಿಜನ ಭೀಕರ ಹತ್ಯೆ ನಡೆದು ಒಂದು ವಾರ ಕಳೆದಿದೆ. ವಿಜಯಪುರದ ಪೊಲೀಸರು ಅರೋಪಿಗಳನ್ನು ಕೇವಲ 3 ದಿನಗಳಲ್ಲಿ ಬಂಧಿಸಿದ್ದರು. ಅರೋಪಿಗಳಾದ ಪ್ರಕಾಶ್ ಅಲಿಯಾಸ್ ಪಿಂಟ್ಯಾ, ರಾಹುಲ್ ತಳಕೇರಿ, ಮಣಿಕಂಠ ಬೆನಕೊಪ್ಪ ಮತ್ತು ಸುದೀಪ್ ಕಾಂಬಳೆಯನ್ನು ಪೊಲೀಸರು ಇವತ್ತು ನಗರದ ಎರೆಡನೇ ಹೆಚ್ಚುವರಿ ಮತ್ತು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನಮ್ಮ ವಿಜಯಪುರ ವರದಿಗಾರ ನೀಡಿರುವ ಮಾಹಿತಿ ಪ್ರಕಾರ ನ್ಯಾಯಾಲಯವು ಆರೋಪಿಗಳನ್ನು 14-ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭೀಮಾ ತೀರದ ಹಂತಕರಲ್ಲಿ ಒಬ್ಬನೆಂಬ ಕುಖ್ಯಾತಿಯ ಚಂದಪ್ಪ ಹರಿಜನ್ ಫೆಬ್ರುವರಿ 11 ರಂದು ವಿಜಯಪುರದ ಮದೀನಾ ನಗರದಲ್ಲಿ ಹತ್ಯೆಗೀಡಾಗಿದ್ದ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಾಗಪ್ಪ ಹರಿಜನ ಕೊಲೆ ರಹಸ್ಯ ಬಯಲು: ಹತ್ಯೆಯಾದ ವಕೀಲ ರವಿಯ ಪತ್ನಿ, ಆಸ್ತಿ ಮೇಲೆ ಕಣ್ಣಾಕಿದ್ದ ನಟೋರಿಯಸ್​ ರೌಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.