ಎಲ್ಲವನ್ನೂ ಬಿಟ್ಟು ದೇವರ ಗುಡಿ ಕಟ್ಟಿ ಪಾಪ ತೊಳೆದುಕೊಳ್ಳಲು ಮುಂದಾಗಿದ್ದ ಬಾಗಪ್ಪ

Edited By:

Updated on: Feb 12, 2025 | 3:02 PM

ಕಳೆದ ಹಲವು ದಶಕಗಳಿಂದ ಭೀಮಾ ತೀರದಲ್ಲಿ ಸಂಚಲನ ಸೃಷ್ಟಿಸಿದ್ದ ಬಾಗಪ್ಪ ಹತ್ಯೆಗೀಡಾಗಿದ್ದಾನೆ. ಹಲವಾರು ಜನರ ಜೀವ ತೆಗೆದ ಮತ್ತು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಾಗಪ್ಪನ ರಕ್ತ ಚರಿತ್ರೆಯ ಕತೆ ರೋಚಕವಾಗಿದೆ. ಭೀಮಾ ತೀರದಲ್ಲಿ ತನ್ನದೇ ಹವಾ ಮಾಡಿದ್ದ ಬಾಗಪ್ಪನನನ್ನೇ ವಿರೋಧಿಗಳು ಕೊಚ್ಚಿ ಕೊಂದು ಹಾಕಿದ್ದಾರೆ. ಇನ್ನು ಬಾಗಪ್ಪ ಇತ್ತೀಚೆಗೆ ಎಲ್ಲಾ ರೌಡಿಸಂ ಬಿಟ್ಟು ನೆಮ್ಮದಿ ಜೀವನ ನಡೆಸಲು ಮುಂದಾಗಿದ್ದ, ಆದ್ರೆ, ಇದಕ್ಕೆ ವಿರೋಧಿಗಳು ಅವಕಾಶ ನೀಡಿಲ್ಲ.

ವಿಜಯಪುರ, (ಫೆಬ್ರವರಿ 12): ರಕ್ತಸಿಕ್ತ ಭೀಮಾತೀರದ ಅಧ್ಯಾಯದಲ್ಲಿ ಮತ್ತೊಂದು ಹತ್ಯೆಯಾಗಿದೆ. ಭೀಮಾತೀರದ ನಟೋರಿಯಸ್ ಖ್ಯಾತಿಯ ಭಾಗಪ್ಪ ಹರಿಜನನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ವಿಜಯಪುರದ ರೆಡಿಯೋ ಕೇಂದ್ರದ ಬಳಿಯ ಮದಿನಾ ನಗರದಲ್ಲಿ ನಿನ್ನೆ(ಫೆಬ್ರವರಿ 11) ರಾತ್ರಿ ನಡೆದ ಬಾಗಪ್ಪ. ಊಟ ಮಾಡಿ ರಾತ್ರಿ ಮನೆಯ ಬಳಿ ವಾಕ್ ಮಾಡುತ್ತಿದ್ದಾಗ ದಾಳಿ ಮಾಡಿ ಕೊಚ್ಚಿ ಕೊಂದಿದ್ದಾರೆ. ಇನ್ನು ಬಾಗಪ್ಪ ಇತ್ತೀಚೆಗೆ ಈ ರೌಡಿಸಂನಿಂದ ದೂರ ಉಳಿದು ನೆಮ್ಮದಿಯಾಗಿ ಜೀವನ ಮಾಡಬೇಕೆಂದಿದ್ದ. ಈ ಸಂಬಂಧ ಮಾಧ್ಯಮಗಳ ಜತೆ ಮಾತನಾಡಿದ್ದ ಬಾಗಪ್ಪ, ನಾನು ಜನಸಾಮಾನ್ಯರಂತೆ ಬದುಕಲು ಇಷ್ಟಪಡುತ್ತಿದ್ದೇನೆಂದು ಹೇಳಿಕೊಂಡಿದ್ದ. ಅದರಂತೆ ಬಾಗಪ್ಪ ಎಲ್ಲವನ್ನೂ ಬಿಟ್ಟು ನೆಮ್ಮದಿ ಜೀವನ ನಡೆಸಲು ಮುಂದಾಗಿದ್ದ. ಅಲ್ಲದೇ ಸ್ವಗ್ರಾಮ ಬ್ಯಾಡಗಿಹಾಳ ಗ್ರಾಮದಲ್ಲಿ 50 ಲಕ್ಷ ರೂಪಾಯಿಗೂ ಅಧಿಕಾರ ಖರ್ಚು ಮಾಡಿ ಲಕ್ಷ್ಮಿ ದೇವಸ್ಥಾನ ಕಟ್ಟಿಸಲು ಮುಂದಾಗಿದ್ದ. ಹೀಗಿರುವಾಗ ವಿರೋಧಿಗಳು ಮಾತ್ರ ಬಾಗಪ್ಪನನ್ನು ನೆಮ್ಮದಿಯಾಗಿ ಇರಲು ಬಿಟ್ಟಿಲ್ಲ.

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More