ಕೆಎಸ್ ಈಶ್ವರಪ್ಪ ಜೊತೆ ಶಿವರಾಜ್ಕುಮಾರ್ ನಡೆಸಿದ ಮಾತುಕತೆ ಏನು? ಇಲ್ಲಿದೆ ವಿಡಿಯೋ
ಶಿವರಾಜ್ಕುಮಾರ್ ಅವರು ಈವರೆಗೂ ನೇರವಾಗಿ ರಾಜಕೀಯಕ್ಕೆ ಎಂಟ್ರಿ ನೀಡಿದವರಲ್ಲ. ಆದರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ನಂಟು ಮೊದಲಿನಿಂದಲೂ ಇದೆ.
ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ (Shivarajkumar) ಮತ್ತು ಮಾಜಿ ಸಚಿವ ಕೆಎಸ್ ಈಶ್ವರಪ್ಪ (KS Eshwarappa) ಅವರು ಮೈಸೂರಿನಲ್ಲಿ ಭೇಟಿ ಆಗಿದ್ದಾರೆ. ಇದೊಂದು ಸಹಜ ಭೇಟಿಯಾಗಿದ್ದು, ಇದಕ್ಕೆ ಯಾವುದೇ ರಾಜಕೀಯ ಹಿನ್ನೆಲೆ ಇಲ್ಲ. ಇಂದು (ಜು.30) ಆಷಾಢ ಶುಕ್ರವಾರವಾದ ಕಾರಣ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಪೂಜೆ ಸಲ್ಲಿಸುವ ಸಲುವಾಗಿ ಈಶ್ವರಪ್ಪ ಬಂದಿದ್ದಾರೆ. ಬಳಿಕ ಉಪಾಹಾರಕ್ಕಾಗಿ ಖಾಸಗಿ ಹೋಟೆಲ್ಗೆ ಅವರು ತೆರಳಿದರು. ಇದೇ ವೇಳೆ ಆ ಹೋಟೆಲ್ನಲ್ಲಿದ್ದ ಶಿವರಾಜ್ಕುಮಾರ್ ಅವರನ್ನು ಈಶ್ವರಪ್ಪ ಭೇಟಿಯಾದರು.
ಶಿವರಾಜ್ಕುಮಾರ್ ಮತ್ತು ಈಶ್ವರಪ್ಪ ಅವರು ಪರಸ್ಪರ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಅವರ ಫಿಟ್ನೆಸ್ಗೆ ಈಶ್ವರಪ್ಪ ಮೆಚ್ಚುಗೆ ಸೂಚಿಸಿದ್ದಾರೆ. ಹೋಟೆಲ್ನಲ್ಲಿದ್ದ ಅಭಿಮಾನಿಗಳು ಇಬ್ಬರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಡಾ. ರಾಜ್ಕುಮಾರ್ ಅವರ ತಂಗಿ (ನಾಗತ್ತೆ) ಅವರನ್ನು ನೋಡಿಕೊಂಡು ಬರಲು ಶಿವರಾಜ್ಕುಮಾರ್ ಗಾಜನೂರಿನತ್ತ ಪ್ರಯಾಣ ಬೆಳೆಸಿದ್ದರು.
ಇದನ್ನೂ ಓದಿ:
ಕಷ್ಟಕಾಲದಲ್ಲಿ ಸಿನಿಮಾ ಕಾರ್ಮಿಕರ ಕೈ ಹಿಡಿದ ಶಿವರಾಜ್ಕುಮಾರ್; 10 ಲಕ್ಷ ರೂ. ನೆರವು
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು

