Jammu and Kashmir: ಶ್ರೀನಗರದಿಂದ ಡಿಕೆ ಶಿವಕುಮಾರ್ ವಿಡಿಯೋ ಬಿಡುಗಡೆ
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು-ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿಂದು (ಜ.30) ಸಮಾರೋಪ ಸಮಾರಂಭವಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶ್ರೀನಗರಕ್ಕೆ ತೆರಳಿದ್ದಾರೆ.
ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು-ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿಂದು (ಜ.30) ಸಮಾರೋಪ ಸಮಾರಂಭವಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಶ್ರೀನಗರಕ್ಕೆ ತೆರಳಿದ್ದಾರೆ. ಡಿಕೆ ಶಿವಕುಮಾರ್ ಜಮ್ಮು-ಕಾಶ್ಮೀರದ ಶ್ರೀನಗರದ ಪ್ರಕೃತಿ ಸೌಂದರ್ಯದ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಶ್ರೀನಗರಕ್ಕೆ ಬಂದಿದ್ದೇನೆ. ಇದು ನನ್ನ ಜೀವನದಲ್ಲೇ ಅತಿ ದೊಡ್ಡ ಸಂತಸ ಸಂಗತಿಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಮಳೆ ಬಿದ್ದ ರೀತಿಯಲ್ಲಿ ಹಿಮ ಬೀಳುತ್ತಿದೆ. ಇಂತಹ ಅದ್ಭುತ ದೃಶ್ಯವನ್ನು ನನ್ನ ಜೀವನದಲ್ಲಿ ನೋಡಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

