Jammu and Kashmir: ಶ್ರೀನಗರದಿಂದ ಡಿಕೆ ಶಿವಕುಮಾರ್ ವಿಡಿಯೋ ಬಿಡುಗಡೆ
ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು-ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿಂದು (ಜ.30) ಸಮಾರೋಪ ಸಮಾರಂಭವಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಶ್ರೀನಗರಕ್ಕೆ ತೆರಳಿದ್ದಾರೆ.
ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದ ಭಾರತ ಜೋಡೋ ಯಾತ್ರೆ ಜಮ್ಮು-ಕಾಶ್ಮೀರ ತಲುಪಿದ್ದು, ಶ್ರೀನಗರದಲ್ಲಿಂದು (ಜ.30) ಸಮಾರೋಪ ಸಮಾರಂಭವಿದೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಶ್ರೀನಗರಕ್ಕೆ ತೆರಳಿದ್ದಾರೆ. ಡಿಕೆ ಶಿವಕುಮಾರ್ ಜಮ್ಮು-ಕಾಶ್ಮೀರದ ಶ್ರೀನಗರದ ಪ್ರಕೃತಿ ಸೌಂದರ್ಯದ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ ಜೋಡೋ ಯಾತ್ರೆಯಲ್ಲಿ ಭಾಗಿಯಾಗಲು ಶ್ರೀನಗರಕ್ಕೆ ಬಂದಿದ್ದೇನೆ. ಇದು ನನ್ನ ಜೀವನದಲ್ಲೇ ಅತಿ ದೊಡ್ಡ ಸಂತಸ ಸಂಗತಿಯಾಗಿದೆ. ಜಮ್ಮು-ಕಾಶ್ಮೀರದಲ್ಲಿ ಮಳೆ ಬಿದ್ದ ರೀತಿಯಲ್ಲಿ ಹಿಮ ಬೀಳುತ್ತಿದೆ. ಇಂತಹ ಅದ್ಭುತ ದೃಶ್ಯವನ್ನು ನನ್ನ ಜೀವನದಲ್ಲಿ ನೋಡಿರಲಿಲ್ಲ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ

